Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೊ ವಿಜಯಾ ಬಿ. ಕೋರಿಶೆಟ್ಟಿಗೆ ಅಭಿಮಾನದ ಗೌರವ

ಹುಬ್ಬಳ್ಳಿ: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೂತನವಾಗಿ ಆಯ್ಕೆಯಾದ ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾಗ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರನ್ನು ಭೇಟಿ ಮಾಡಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ, ನೂತನ ಕುಲಪತಿ ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರಿಗೆ ಶಾಲು, ಗ್ರಂಥ ನೀಡಿ, ಮಾಲಾರ್ಪಣೆ ಮಾಡಿ ಅತ್ಯಂತ ಹೃದಯಸ್ಪರ್ಶಿಯಾಗಿ ಅಭಿಮಾನದಿಂದ ಆತ್ಮೀಯವಾಗಿ ಪ್ರೀತಿಯಿಂದ ಗೌರವಿಸಲಾಯಿತು. ಹುತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರ ಅವಧಿಯಲ್ಲಿ ಸರ್ವತೋಮುಖ ಅಭಿವೃದ್ದಿಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ದೇಶದಲ್ಲಿಯೇ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿ, ಗುರುತಿಸುವಂತೆ ಆಗಲೆಂದು ಶುಭ ಕೋರಿದರು.

ಸೋಹನ ಸುರೇಶ ಹೊರಕೇರಿ, ವಿಜಯಪುರ, ಬಬಲೇಶ್ವರದಲ್ಲಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ, ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರ ಪತಿ, ವೈದ್ಯ ಡಾ. ರಾಮನಗೌಡ ಪಾಟೀಲ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಅಖಿಲ ಕರ್ನಾಟಕ ಮಹಿಳಾ ಕನ್ನಡ ಸಾಹಿತ್ಯ ಪರಿಷತ್ ಹುಬ್ಬಳ್ಳಿ ತಾಲೂಕು ನಗರ ಘಟಕದ ಅಧ್ಯಕ್ಷ ಡಾ. ಸರ್ವಮಂಗಳಾ ಎಂ. ಕುದರಿ, ಮುಂತಾದವರು ಭಾಗವಹಿಸಿದ್ದರು.
ಸರ್ವಮಂಗಳಾ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ