Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುಚ್ಛಕ್ತಿ {ತಿದ್ದುಪಡಿ) ಮಸೂದೆ ವಿರುದ್ಧ ಪ್ರತಿಭಟನೆ 

ಬಳ್ಳಾರಿ,ಮಾ.11:  ಕೇಂದ್ರ ಬಿಜೆಪಿ ಸರ್ಕಾರ ರೈತ-ಕಾರ್ಮಿಕರ ವಿರೋಧಿ, ಜನವಿರೋಧಿಯಾದ ವಿದ್ಯುಚ್ಛಕ್ತಿ {ತಿದ್ದುಪಡಿ) ಮಸೂದೆ ೨೦೨೫ ಅನ್ನು ಸಂಸತ್ತಿನ ಅಧಿವೇಶನದಲ್ಲಿ ಮಂಡಿಸುವುದರ ವಿರುದ್ಧ ಜಿಲ್ಲಾಧಿಕಾರಿ ಕಛೇರಿಯಲ್ಲಿ ಎಐಪಿಎಫ್,  ಎಐಕೆಕೆಎಂಎಸ್,  ಎಐಯುಟಿಯುಸಿ ಹಾಗೂ ಅಖಿಲ ಭಾರತ ವಿದ್ಯುತ್ ಗ್ರಾಹಕರ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಮಸೂದೆಯ ಪ್ರತಿಕೃತಿಯನ್ನು ದಹಿಸಲಾಯಿತು.


ಈ ಸಂದರ್ಭದಲ್ಲಿ ಎಐಪಿಎಫ್ ಜಿಲ್ಲಾ ನಾಯಕ ಡಾ||ಪ್ರಮೋದ್ ಮಾತನಾಡುತ್ತಾ, “ಮಸೂದೆಯ ನಿಬಂಧನೆಗಳು  ದೇಶಾದ್ಯಂತ ನೌಕರರು, ಕಾರ್ಮಿಕರು, ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿವೆ. ಜನರ ತೆರಿಗೆ ಹಣದಿಂದ ನಿರ್ಮಿಸಲಾದ ಈ ಬೃಹತ್ ಉದ್ದಿಮೆಯನ್ನು,, ಮುಖ್ಯವಾಗಿ ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪೆನಿಗಳಿಗೆ  ನೀಡಲಾಗುತ್ತದೆ. ಖಾಯಂ ಉದ್ಯೋಗ ವಿಲ್ಲದೆ  ಸಂಕಷ್ಟದಲ್ಲಿರುವ ಗುತ್ತಿಗೆ ಕಾರ್ಮಿಕರ  ಬದುಕನ್ನು ಇನ್ನಷ್ಟು ಅಭದ್ರತೆಗೆ ತಳ್ಳಿದಂತಾಗುತ್ತದೆ. ಸೇವಾ ಪರಿಸ್ಥಿತಿಗಳ ಕಡಿತ, ಉದ್ಯೋಗ ಕಡಿತ ಇವು ತಲೆ ದೂರತ್ತವೆ. ಈ ಹಿನ್ನಲೆಯಲ್ಲಿ  ದೇಶವ್ಯಾಪಿ ಎಲ್ಲಾ  ವರ್ಗದ ಜನರು ಪ್ರಬಲ ಹೋರಾಟ ರೂಪಿಸುವ ಅಗತ್ಯ  ಇದೆ” ಎಂದರು.


ಅಖಿಲ ಭಾರತ ವಿದ್ಯುತ್ ಗ್ರಾಹಕರ ಸಂಘದ ಜಿಲ್ಲಾ ಮುಖಂಡ ಆರ್.ಸೋಮಶೇಖರ್‌ಗೌಡ ಮಾತನಾಡುತ್ತಾ, “ಹಲವಾರು ವಲಯಗಳಲ್ಲಿನ ಅನುಭವವು,  ಖಾಸಗೀಕರಣವು  ಹೆಚ್ಚಿನ ಸುಂಕಗಳು, ಲಾಭ-ಚಾಲಿತ ಸೇವಾ ವಿತರಣೆ ಮತ್ತು ಗ್ರಾಮೀಣ ಮತ್ತು ಕಡಿಮೆ ಲಾಭದಾಯಕ ಪ್ರದೇಶಗಳ ನಿರ್ಲಕ್ಷ್ಯಕ್ಕೆ ಕಾರಣವಾಗುತ್ತದೆ ಎಂದು ತೋರಿಸಿದೆ. ಇದರಿಂದಾಗಿ ಸಾಮಾನ್ಯ ಗ್ರಾಹಕರಿಗೆ ಹೊರೆಯಾಗುತ್ತದೆ” ಎಂದರು.


ಎಐಕೆಕೆಎAಎಸ್ ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡುತ್ತಾ, ರೈತರು ಮತ್ತು ಸಣ್ಣ ಪ್ರಮಾಣದ ಉದ್ಯಮಗಳು ಕೈಗೆಟುಕುವ ವಿದ್ಯುತ್ ಅನ್ನು ಹೆಚ್ಚಾಗಿ ಅವಲಂಬಿಸಿವೆ. ಖಾಸಗೀಕರಣವು ಸುಂಕಗಳನ್ನು ಹೆಚ್ಚಿಸಲು ಮತ್ತು ಪ್ರಸ್ತುತ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನು ಬೆಂಬಲಿಸುವ ಸಬ್ಸಿಡಿಯನ್ನು ದುರ್ಬಲಗೊಳಿಸುತ್ತವೆ” ಎಂದರು.


ಈ ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷರಾದ ಎ. ದೇವದಾಸ್, ಉಪಾಧ್ಯಕ್ಷರಾದ ಎ. ಶಾಂತಾ, ಎಐಪಿಎಫ್ ನ ಕಿರಣ್ ಕುಮಾರ್, ಮುಖಂಡರಾದ ಹನುಮಪ್ಪ, ಶರ್ಮಾಸ್, ಸುರೇಶ್, ಚೇತನ್, ಮುರಳಿಕೃಷ್ಣ, ಮುಂತಾದವರು ಉಪಸ್ಥಿತರಿದ್ದರು. ವಿದ್ಯುತ್ ಗ್ರಾಹಕರ ಸಂಘದ ರಾಜಾ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ