Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುಚ್ಛಕ್ತಿ {ತಿದ್ದುಪಡಿ) ಮಸೂದೆ ವಿರುದ್ಧ ಪ್ರತಿಭಟನೆ 

ಬಳ್ಳಾರಿ,ಮಾ.11:  ಕೇಂದ್ರ ಬಿಜೆಪಿ ಸರ್ಕಾರ ರೈತ-ಕಾರ್ಮಿಕರ ವಿರೋಧಿ, ಜನವಿರೋಧಿಯಾದ ವಿದ್ಯುಚ್ಛಕ್ತಿ {ತಿದ್ದುಪಡಿ) ಮಸೂದೆ ೨೦೨೫ ಅನ್ನು ಸಂಸತ್ತಿನ ಅಧಿವೇಶನದಲ್ಲಿ ಮಂಡಿಸುವುದರ ವಿರುದ್ಧ ಜಿಲ್ಲಾಧಿಕಾರಿ ಕಛೇರಿಯಲ್ಲಿ ಎಐಪಿಎಫ್,  ಎಐಕೆಕೆಎಂಎಸ್,  ಎಐಯುಟಿಯುಸಿ ಹಾಗೂ ಅಖಿಲ ಭಾರತ ವಿದ್ಯುತ್ ಗ್ರಾಹಕರ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಮಸೂದೆಯ ಪ್ರತಿಕೃತಿಯನ್ನು ದಹಿಸಲಾಯಿತು.


ಈ ಸಂದರ್ಭದಲ್ಲಿ ಎಐಪಿಎಫ್ ಜಿಲ್ಲಾ ನಾಯಕ ಡಾ||ಪ್ರಮೋದ್ ಮಾತನಾಡುತ್ತಾ, “ಮಸೂದೆಯ ನಿಬಂಧನೆಗಳು  ದೇಶಾದ್ಯಂತ ನೌಕರರು, ಕಾರ್ಮಿಕರು, ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿವೆ. ಜನರ ತೆರಿಗೆ ಹಣದಿಂದ ನಿರ್ಮಿಸಲಾದ ಈ ಬೃಹತ್ ಉದ್ದಿಮೆಯನ್ನು,, ಮುಖ್ಯವಾಗಿ ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪೆನಿಗಳಿಗೆ  ನೀಡಲಾಗುತ್ತದೆ. ಖಾಯಂ ಉದ್ಯೋಗ ವಿಲ್ಲದೆ  ಸಂಕಷ್ಟದಲ್ಲಿರುವ ಗುತ್ತಿಗೆ ಕಾರ್ಮಿಕರ  ಬದುಕನ್ನು ಇನ್ನಷ್ಟು ಅಭದ್ರತೆಗೆ ತಳ್ಳಿದಂತಾಗುತ್ತದೆ. ಸೇವಾ ಪರಿಸ್ಥಿತಿಗಳ ಕಡಿತ, ಉದ್ಯೋಗ ಕಡಿತ ಇವು ತಲೆ ದೂರತ್ತವೆ. ಈ ಹಿನ್ನಲೆಯಲ್ಲಿ  ದೇಶವ್ಯಾಪಿ ಎಲ್ಲಾ  ವರ್ಗದ ಜನರು ಪ್ರಬಲ ಹೋರಾಟ ರೂಪಿಸುವ ಅಗತ್ಯ  ಇದೆ” ಎಂದರು.


ಅಖಿಲ ಭಾರತ ವಿದ್ಯುತ್ ಗ್ರಾಹಕರ ಸಂಘದ ಜಿಲ್ಲಾ ಮುಖಂಡ ಆರ್.ಸೋಮಶೇಖರ್‌ಗೌಡ ಮಾತನಾಡುತ್ತಾ, “ಹಲವಾರು ವಲಯಗಳಲ್ಲಿನ ಅನುಭವವು,  ಖಾಸಗೀಕರಣವು  ಹೆಚ್ಚಿನ ಸುಂಕಗಳು, ಲಾಭ-ಚಾಲಿತ ಸೇವಾ ವಿತರಣೆ ಮತ್ತು ಗ್ರಾಮೀಣ ಮತ್ತು ಕಡಿಮೆ ಲಾಭದಾಯಕ ಪ್ರದೇಶಗಳ ನಿರ್ಲಕ್ಷ್ಯಕ್ಕೆ ಕಾರಣವಾಗುತ್ತದೆ ಎಂದು ತೋರಿಸಿದೆ. ಇದರಿಂದಾಗಿ ಸಾಮಾನ್ಯ ಗ್ರಾಹಕರಿಗೆ ಹೊರೆಯಾಗುತ್ತದೆ” ಎಂದರು.


ಎಐಕೆಕೆಎAಎಸ್ ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡುತ್ತಾ, ರೈತರು ಮತ್ತು ಸಣ್ಣ ಪ್ರಮಾಣದ ಉದ್ಯಮಗಳು ಕೈಗೆಟುಕುವ ವಿದ್ಯುತ್ ಅನ್ನು ಹೆಚ್ಚಾಗಿ ಅವಲಂಬಿಸಿವೆ. ಖಾಸಗೀಕರಣವು ಸುಂಕಗಳನ್ನು ಹೆಚ್ಚಿಸಲು ಮತ್ತು ಪ್ರಸ್ತುತ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನು ಬೆಂಬಲಿಸುವ ಸಬ್ಸಿಡಿಯನ್ನು ದುರ್ಬಲಗೊಳಿಸುತ್ತವೆ” ಎಂದರು.


ಈ ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷರಾದ ಎ. ದೇವದಾಸ್, ಉಪಾಧ್ಯಕ್ಷರಾದ ಎ. ಶಾಂತಾ, ಎಐಪಿಎಫ್ ನ ಕಿರಣ್ ಕುಮಾರ್, ಮುಖಂಡರಾದ ಹನುಮಪ್ಪ, ಶರ್ಮಾಸ್, ಸುರೇಶ್, ಚೇತನ್, ಮುರಳಿಕೃಷ್ಣ, ಮುಂತಾದವರು ಉಪಸ್ಥಿತರಿದ್ದರು. ವಿದ್ಯುತ್ ಗ್ರಾಹಕರ ಸಂಘದ ರಾಜಾ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ