ಬೆಳಗಾವಿ : ಭ್ರಷ್ಟಚಾರದಲ್ಲಿ ಭಾಗಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರುಗಳಾದ ನಾಗೇಂದ್ರ, ಜಮೀರ್ ಅಹಮದ್ ಖಾನ್, ಸಂತೋಷ ಲಾಡ್ ಅವರನ್ನು ಸಂಪುಟ ಪುನರಚನೆಯಲ್ಲಿ ಮತ್ತೆ ಸಚಿವರನ್ನಾಗಿ ಮಾಡಿದ್ದನ್ನು ಖಂಡಿಸಿ ಅವರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿ ಬಿಜೆಪಿ ಘಟಕದ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ವಜಾಗೊಂಡ ಸಚಿವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವದು ಭ್ರಷ್ಟಾಚಾರಕ್ಕೆ ಪ್ರೇರಣೆ ಕೊಟ್ಟಂತೆ ಆಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಭ್ರಷ್ಟ ಸಚಿವರನ್ನು ಕೂಡಲೇ ಕೈಬಿಡಿ ಇಲ್ಲವೇ ತಾವೇ ರಾಜೀನಾಮೆ ನೀಡಿ ಹೊರಹೋಗಿರಿ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜಯ ಪಾಟೀಲ, ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡರ , ಅರವಿಂದ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ್ ದೇಶಪಾಂಡೆ,ಧನಶ್ರೀ ದೇಸಾಯಿ ಪ್ರಮುಖ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.