LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ  ಶುರುವಾಗಿದೆ.


ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್