Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಮೂಡಲಗಿಯಲ್ಲಿ ಪಂಚಮಸಾಲಿಗಳಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ"

ಮೂಡಲಗಿ : ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟ ನಿಯಂತ್ರಿಸಲು ಪೊಲೀಸರು ನಡೆಸಿದ ಲಾಠಿಚಾರ್ಜ ನೆಪದಲ್ಲಿನ ಮಾರಣಾಂತಿಕ ಹಲ್ಲೆಯು ಖಂಡನೀಯ ಎಂದು ಪಂಚಮಸಾಲಿ ಮುಖಂಡ ಬಸನಿಂಗ ನಿಂಗನೂರ ಹೇಳಿದರು.



ಗುರುವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸುತ್ತ ಪ್ರತಿಭಟಿಸಿ ತಹಶೀಲ್ದಾರ್ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ನೀಡಿ ಮಾತನಾಡಿದ ಅವರು, ಪಂಚಮಸಾಲಿಗಳು ಶಾಂತಿ ಪ್ರೀಯರು, ಹಕ್ಕಿಗಾಗಿ ಹೋರಾಟ ಮಾಡುತ್ತಿರುವಾಗ ಪೊಲೀಸರ ಲಾಠಿಚಾರ್ಜ ನಿಂದ ಸಾವಿರಾರು ಜನರಿಗೆ ಗಂಬೀರಗಾಯಗಳಾಗಿದ್ದು,, ಘಟನೆಗೆ ಕಾರಣರಾದ ಏಡಿಜಿಪಿ ಅಧಿಕಾರಿ ಆರ್.ಹಿತೇಂದ್ರ ರವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.



ತಾಲೂಕಾ ಪಂಚಮಸಾಲಿ ವಕೀಲರ ಸಂಘದ ಅಧ್ಯಕ್ಷ ಸುಭಾಸ ತುಪ್ಪದ ಹಾಗೂ ಪಂಚಮಸಾಲಿ ಯುವ ಮುಖಂಡ ಮಹಾಂತೇಶ ಕುಡಚಿ ಮಾತನಾಡಿ ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಕ್ಷಾಂತರ ಪಂಚಮಸಾಲಿಗಳ ಮೇಲೆ ಗುಂಡಾಗಿರಿ ಹಾಗೂ ಲಾಟಿಚಾರ್ಜ್ ಮಾಡಿಸಿ ರಕ್ತ ಹರಿಸಿದ್ದಾರೆ. ಇಂತಹ ಕ್ರೂರ ಕೃತ್ಯಕ್ಕೆ ಕಡಿವಾಣ ಹಾಕಬೇಕು. ಲಿಂಗಾಯತರ ಹೋರಾಟ ಹತ್ತಿಕ್ಕುವ ಹುನ್ನಾರದ ರೂವಾರಿ ಸಿ.ಎಂ.ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಪಂಚಮಸಾಲಿಗಳು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.



ಲಿಂಗಾಯತ ಹೋರಾಟ ಸಮೀತಿಯ ಪ್ರ.ಕಾರ್ಯದರ್ಶಿ ಪ್ರಕಾಶ ಕಾಳಶೆಟ್ಟಿ ಮಾತನಾಡಿ ದುರುದ್ಧೇಶ ಪೂರ್ವಕವಾದ ಲಾಠಿಚಾರ್ಜನಿಂದ ಆದ ಅನಾಹುತದ ಗಂಭೀರತೆ ಅರಿತು ಈ ಕೂಡಲೇ ಮುಖ್ಯಮಂತ್ರಿಗಳು ಸಮಾಜದ ಹಾಗೂ ನಮ್ಮ ಜಗದ್ಗುರುಗಳ ಕ್ಷಮೆ ಕೇಳಬೇಕು. ಈ ಕುತಂತ್ರ ರಾಜಕಾರಣಕ್ಕೆ ಕಡಿವಾಣ ಹಾಕಿ, ಪಂಚಮಸಾಲಿಗಳ ಹಾಗೂ ರೈತರ ಮೇಲೆ ಹಾಕಿರುವ ಕೇಸ್ ಅನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬಿ.ಎಮ್.ರಂಗಾಪೂರ, ಬಸವಪ್ರಭು ನಿಡಗುಂದಿ, ಶಿವಬಸು ಜುಂಜರವಾಡ, ಎ.ಎಸ್.ಕೌಜಲಗಿ, ಸಂಗಮೇಶ ಕೌಜಲಗಿ, ಆಯ್.ವಾಯ್.ಸಂಕನ್ನವರ, ಶಿವನಗೌಡ ಪಾಟೀಲ, ಚನಗೌಡ ಪಾಟೀಲ, ಕೆಂಪಣ್ಣ ಮುದೋಳ ಸೇರಿದಂತೆ ಅನೇಕ ವಕೀಲರು ಹಾಗೂ ಹಳ್ಳಿಗಳಿಂದ ನೂರಾರು ಮುಖಂಡರು ಬಾಗವಹಿಸಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ