LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ವಿದ್ಯಾರ್ಥಿಗಳ ಉಜ್ವಲ ಭವಷ್ಯಕ್ಕೆ ಪಿ ಯು ಶಿಕ್ಷಣ ಅಡಿಪಾಯ : ನಾನಾಸಾಹೇಬ ಪಾಟೀಲ 

ನೇಸರಗಿ., ಆ. 29.ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಏರಿಳಿತ ಅನುಭವಿಸಿ ವ್ಯಾಸಂಗ ಸಂದರ್ಭದಲ್ಲಿ ಮುನ್ನಡೆ ಅನುಭವಿಸುತ್ತಾರೆ. ಆದರೆ ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳು ಚನ್ನಾಗಿ ಕಲಿತು ಶ್ರಮಪಟ್ಟು ವ್ಯಾಸಂಗ ಮಾಡಿದರೆ ಮುಂದೆ ಉಜ್ವಲ ಭವಿಷ್ಯ ಹಾಗೂ ಶಿಕ್ಷಣದ ಉತ್ತಮ ಅಡಿಪಾಯ ಎಂದು ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ನಾನಾಸಾಹೇಬ ಪಾಟೀಲ ಹೇಳಿದರು.
      ಅವರು ಶನಿವಾರದಂದು ಗ್ರಾಮದ ಶ್ರೀ ಚನ್ನವೃಷಬೇಂದ್ರ ಅಜ್ಜನವರ ಲೀಲಾಮಠದಲ್ಲಿ ಆಯೋಜಿಸಲಾಗಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ನೇಸರಗಿ ಇದರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡಾ, ಎನ್ ಎಸ್ ಎಸ್ ಘಟಕ, ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ ನೇಸರಗಿ ಭಾಗದ ವಿದ್ಯಾರ್ಥಿಗಳಿಗೆ ಬಹು ಅನುಕೂಲ ಇರುವ ಕಾಲೇಜು ಇದ್ದು ಜಿಲ್ಲಾ, ತಾಲೂಕಿಗೆ ಹೋಗಿ ಕಲಿಯುವ ಪ್ರಮೇಯು ಇಲ್ಲ, ವ್ಯಾಸಂಗ ಕಲಿಸುವ ಪ್ರಾದ್ಯಾಪಕರು ನುರಿತವರು ಇದ್ದು, ಗುರುವಿಗೆ ಗುಲಾಮರಾಗಿ ಶಿಕ್ಷಣ ಕಲಿತು ಜೀವನದಲ್ಲಿ ಮುಂದೆ ಬಂದು  ಪಾಲಕರ ಅಸೆ ಈಡೇರಿಸಿರಿ   ಮತ್ತು ರಾಜ್ಯ ಮಟ್ಟ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಕ್ರೀಡೆಗೆ ಹೋಗುವ ವಿದ್ಯಾರ್ಥಿಗಳಿಗೆ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ವಿದ್ಯಾರ್ಥಿಗಳಿಗೆ  ಸ್ವಂತ ಹಣಕಾಸು ನೆರವು ನೀಡುತ್ತಿದ್ದು ಇದರ ಸದುಪಯೋಗ ಪಡೆಯಿರಿ ಎಂದು ನಾನಾಸಾಹೇಬ ಪಾಟೀಲ ಹೇಳಿದರು.
news_1788004670_1_585.webp
     ಕಾರ್ಯಕ್ರಮದ ಅಥಿತಿಗಳಾಗಿ ಆಗಮಿಸಿದ್ದ ನಂದಗಡ ಮಹಾತ್ಮಾ ಗಾಂಧಿ ಕಾಲೇಜಿನ ಪ್ರಾಚಾರ್ಯರಾದ ಎಂ ಕೆ ಭಜಂತ್ರಿ ಮಾತನಾಡಿ ಭವಿಷ್ಯದ ದ್ರಿಷ್ಟಿಯಿಂದ ವಿದ್ಯಾರ್ಥಿಗಳು ಶ್ರದ್ದೆ, ನಿಷ್ಠೆ, ಶ್ರಮದಿಂದ ವ್ಯಾಸಂಗ ಮಾಡಿ, ಓದು, ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ, ಕಲೆ  ವಿಷಯಗಳಲ್ಲಿ ತಮ್ಮ ಪ್ರತಿಭೆ ತೋರಿಸಿ ಜೀವನದಲ್ಲಿ ಮುಂದೆ ಬನ್ನಿ ಎಂದರು.
     ಕಾಲೇಜು ಪ್ರಾಂಶುಪಾಲರಾದ ಎಸ್ ವ್ಹಿ  ದೊಡ್ಡಮನಿ ಮಾತನಾಡಿ ನಮ್ಮ ಕಾಲೇಜು ವಿದ್ಯಾರ್ಥಿನೀಯರು ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದು ಸಂತಸ ತಂದಿದ್ದು. ಅದೇ ರೀತಿ ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಕ್ರೀಡೆ, ಎಲ್ಲ ರೀತಿಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಿ ಎಂದರು.
news_1788004670_0_937.webp
      ಕಾರ್ಯಕ್ರಮದಲ್ಲಿ ಕಾಲೇಜು ಸುಧಾರಣೆ ಸಮಿತಿ ಉಪಾಧ್ಯಕ್ಷ ಬಸವರಾಜ ಚಿಕ್ಕನಗೌಡ್ರ,ದೈಹಿಕ ಶಿಕ್ಷಕರಾದ ಸುಭಾಷ ಪಾಟೀಲ,ಮುಖಂಡ  ಸುರೇಶ ಅಗಸಿಮನಿ,ಪ್ರೊ. ರಾಮಲಿಂಗ ಪಾಟೀಲ, ಬಸವರಾಜ ಉಲ್ಲಾಳ, ಪ್ರೊ. ಎಂ ಕೆ ಬೆಟಗೇರಿ, ಪ್ರೊ. ಕೆ ಎಂ ಗಾಣಿಗೇರ, ಪ್ರೊ. ಪಿ ಎಂ ಬೋಳನ್ನವರ, ಪ್ರೊ. ಸಿ ಬಿ ರೊಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರೆ,ಪ್ರೊ. ರಾಯವ್ವಗೋಳ  ಮೇಡಂ ಸ್ವಾಗತಿಸಿದರು. ಸಂದ್ಯಾ ಮೇಡಮ, ವಾಲಿಕಾರ ಸರ್  ವಂದಿಸಿದರು.ಕಾಲೇಜಿನ ಎಲ್ಲ ಪ್ರಾದ್ಯಾಪಕರು, ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್