Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮಖಂಡಿಯಲ್ಲಿ ಜನಸಂಪರ್ಕ ಸಭೆ : ೧೩ ಅರ್ಜಿಗಳ ಸ್ವೀಕಾರ

ಬಾಗಲಕೋಟೆ, ಜೂನ್ ೧೧ : ಜಮಖಂಡಿ ತಹಶೀಲ್ದಾರ ಕಾರ್ಯಾಲಯದಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಬಿ.ನಂದಗಾವಿ ಅವರ ನೇತೃತ್ವದಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ೧೩ ಅರ್ಜಿಗಳು ಸ್ವೀಕರಿಸಲಾಯಿತು.
ಜನಸಂಪರ್ಕ ಸಭೆಯಲ್ಲಿ ಜಮಖಂಡಿ ತಾಲೂಕಾ ಮಟ್ಟದ ವಿವಿಧ ಇಲಾಖೆಯ ೪೦ ಜನ ಅಧಿಕಾರಿಗಳು ಸೇರಿದಂತೆ ಲೋಕಾಯುಕ್ತ ಠಾಣೆಯ ಪೊಲೀಸ್ ಉಪಾಧೀಕ್ಷಕ ಸುರೇಶರೆಡ್ಡಿ ಎಂ.ಎಸ್, ಪೊಲೀಸ್ ನಿರೀಕ್ಷಕರಾದ ಎಂ.ಬಿ.ಬಿರಾದಾರ, ಎನ್.ಆರ್.ಖಿಲಾರೆ ಹಾಜರಿದ್ದು, ಬಂದ ದೂರು ಅರ್ಜಿಗಳನ್ನು ಕೂಡಲೇ ಇತ್ಯರ್ಥಪಡಿಸಿ ಹಿಂಬರಹ ಇಲ್ಲವೇ ಮಾಹಿತಿ ನೀಡುವಂತೆ ಸಭೆಯಲ್ಲಿ ಸೂಚಿಸಲಾಯಿತು.  
ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗಳ ಬಗ್ಗೆ ವಿಚಾರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಧ್ಯತೆಯ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲು ಮತ್ತು ಸಾರ್ವಜನಿಕ ಸಲ್ಲಿಸಿದ ಅರ್ಜಿಗಳನ್ನು ಸ್ವೀಕೃತಿ ವಿಭಾಗದಲ್ಲಿ ಸ್ವೀಕರಿಸಿ ಸಂಬಂಧಿಸಿದವರಿಗೆ ಸ್ವೀಕೃತಿ ನೀಡಲು ಹಾಗೂ ಸದರಿ ವಿಷಯಗಳನ್ನು ವಿನಾಕಾರಣ ಬಾಕಿ ಇಟ್ಟುಕೊಳ್ಳದೇ ನಿಯಮಾನುಸಾರ ಕ್ರಮ ಜರುಗಿಸಲು ತಿಳಿಸಲಾಯಿತು. 
ಒಂದು ವೇಳೆ ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದಿದ್ದಲ್ಲಿ ಸೂಕ್ತ ಮಾಹಿತಿಯೊಂದಿಗೆ ಕೂಡಲೇ ಹಿಂಬರಹ ನೀಡಲು ಸೂಚಿಸಲಾಯಿತು. ಶಾಲೆ, ಕಾಲೇಜು ಹಾಗೂ ವಸತಿ ನಿಲಯಗಳ ಆವರಣದಲ್ಲಿ ಮತ್ತು ಅಕ್ಕ-ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿರುವ ವಿದ್ಯುತ್ ಕಂಭ ಪರಿವರ್ತಕ ಹಾಗೂ ಇತರೆ ಇಲೆಕ್ಟ್ರಿಕ್ ಸಾಧನಗಳನ್ನು ತುರ್ತಾಗಿ ಸ್ಥಳಾಂತರ ಮಾಡಲು ಹಾಜರಿದ್ದ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಸಾರ್ವಜನಿಕ ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವದರ ಜೊತೆಗೆ ಬಯಲು ಮುಕ್ತ ಶೌಚಾಲಯ ಆಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ