Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಕ್ರೇನ್‌ ಮತ್ತು ರಷ್ಯಾ ಭೀಕರ ಕಾಳಗ; ಕದನ ವಿರಾಮಕ್ಕೆ ಒಪ್ಪಿದ ಪುಟಿನ್‌

ವಾಷಿಂಗ್ಟನ್(ಯುಎಸ್‌ಎ)​: ಉಕ್ರೇನ್​-ರಷ್ಯಾ ನಡುವೆ ಕದನ ವಿರಾಮ ಘೋಷಿಸುವ ಅಮೆರಿಕದ ಪ್ರಸ್ತಾಪವನ್ನು ವ್ಲಾಡಿಮಿರ್​ ಪುಟನ್​ ಒಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಯುದ್ದ ಅಂತ್ಯಗೊಳಿಸುವ ಕುರಿತು ಮಂಗಳವಾರ ದೂರವಾಣಿ ಕರೆ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಕ್ರೇನ್‌ನ ಇಂಧನ ಮೂಲಸೌಕರ್ಯಕ್ಕಾಗಿ 30 ದಿನಗಳ ತಕ್ಷಣದ ಸಣ್ಣ ಕದನ ವಿರಾಮಕ್ಕೆ ರಷ್ಯಾ ಒಪ್ಪಿಗೆ ಸೂಚಿಸಿದೆ.


ಉಕ್ರೇನ್​ನ ಇಂಧನ ಹಾಗೂ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಲು ಪುಟಿನ್ ಮತ್ತು ಟ್ರಂಪ್ ನಡುವೆ ಪ್ರಾಥಮಿಕ ಒಪ್ಪಂದವಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮ ಟ್ರುಥ್​ನಲ್ಲಿ ಟ್ರಂಪ್​, "ಶಾಂತಿ ಒಪ್ಪಂದಕ್ಕೆ ಅನೇಕ ಅಂಶಗಳ ಕುರಿತು ಮಾತುಕತೆ ನಡೆಸಲಾಗಿದೆ. ಇದರ ಪರಿಣಾಮ ಕದನ ವಿರಾಮ ಪ್ರಕ್ರಿಯೆ ನಡೆಸಲಾಗುವುದು" ಎಂದಿದ್ದಾರೆ.


"ರಷ್ಯಾಧ್ಯಕ್ಷರ ಜೊತೆಗಿನ ತಮ್ಮ ಮಾತುಕತೆ ಫಲಪ್ರದವಾಗಿದೆ. ಎಲ್ಲಾ ಇಂಧನ ಮತ್ತು ಮೂಲಸೌಕರ್ಯದ ಮೇಲಿನ ಕದನ ವಿರಾಮಕ್ಕೆ ರಷ್ಯಾ ಒಪ್ಪಿದೆ. ಈ ಕದನ ವಿರಾಮವನ್ನು ತ್ವರಿತಗೊಳಿಸಲು ನಾವು ಕಾರ್ಯನಿರ್ವಹಿಸುತ್ತೇವೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಭೀಕರ ಯುದ್ಧವನ್ನು ಕೊನೆಗೊಳಿಸಬೇಕಿದೆ. ಆಗ ನಾನು ಅಧ್ಯಕ್ಷನಾಗಿದ್ದಿದ್ದರೆ ಈ ಯುದ್ದವೇ ಪ್ರಾರಂಭವಾಗುತ್ತಿರಲಿಲ್ಲ. ಯುದ್ಧದಲ್ಲಿ ಅನೇಕ ಸೈನಿಕರು ಸಾವನ್ನಪ್ಪಿದ್ದಾರೆ. ಪುಟಿನ್​ ಮತ್ತು ಝೆಲನ್ಸ್ಕಿ ಇಬ್ಬರೂ ಯುದ್ದ ಕೊನೆಗೊಳಿಸಲು ಬಯಸಿದ್ದಾರೆ. ಈ ಪ್ರಕ್ರಿಯೆ ಇದೀಗ ಪೂರ್ಣ ಪ್ರಮಾಣದಲ್ಲಿದೆ. ಮಾನವೀಯತೆ ದೃಷ್ಟಿಯಿಂದ ನಾವು ಕೆಲಸ ಮಾಡುತ್ತೇವೆ" ಎಂದು ಟ್ರಂಪ್ ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ