LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಉಕ್ರೇನ್‌ ಮತ್ತು ರಷ್ಯಾ ಭೀಕರ ಕಾಳಗ; ಕದನ ವಿರಾಮಕ್ಕೆ ಒಪ್ಪಿದ ಪುಟಿನ್‌

ವಾಷಿಂಗ್ಟನ್(ಯುಎಸ್‌ಎ)​: ಉಕ್ರೇನ್​-ರಷ್ಯಾ ನಡುವೆ ಕದನ ವಿರಾಮ ಘೋಷಿಸುವ ಅಮೆರಿಕದ ಪ್ರಸ್ತಾಪವನ್ನು ವ್ಲಾಡಿಮಿರ್​ ಪುಟನ್​ ಒಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಯುದ್ದ ಅಂತ್ಯಗೊಳಿಸುವ ಕುರಿತು ಮಂಗಳವಾರ ದೂರವಾಣಿ ಕರೆ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಕ್ರೇನ್‌ನ ಇಂಧನ ಮೂಲಸೌಕರ್ಯಕ್ಕಾಗಿ 30 ದಿನಗಳ ತಕ್ಷಣದ ಸಣ್ಣ ಕದನ ವಿರಾಮಕ್ಕೆ ರಷ್ಯಾ ಒಪ್ಪಿಗೆ ಸೂಚಿಸಿದೆ.


ಉಕ್ರೇನ್​ನ ಇಂಧನ ಹಾಗೂ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಲು ಪುಟಿನ್ ಮತ್ತು ಟ್ರಂಪ್ ನಡುವೆ ಪ್ರಾಥಮಿಕ ಒಪ್ಪಂದವಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮ ಟ್ರುಥ್​ನಲ್ಲಿ ಟ್ರಂಪ್​, "ಶಾಂತಿ ಒಪ್ಪಂದಕ್ಕೆ ಅನೇಕ ಅಂಶಗಳ ಕುರಿತು ಮಾತುಕತೆ ನಡೆಸಲಾಗಿದೆ. ಇದರ ಪರಿಣಾಮ ಕದನ ವಿರಾಮ ಪ್ರಕ್ರಿಯೆ ನಡೆಸಲಾಗುವುದು" ಎಂದಿದ್ದಾರೆ.


"ರಷ್ಯಾಧ್ಯಕ್ಷರ ಜೊತೆಗಿನ ತಮ್ಮ ಮಾತುಕತೆ ಫಲಪ್ರದವಾಗಿದೆ. ಎಲ್ಲಾ ಇಂಧನ ಮತ್ತು ಮೂಲಸೌಕರ್ಯದ ಮೇಲಿನ ಕದನ ವಿರಾಮಕ್ಕೆ ರಷ್ಯಾ ಒಪ್ಪಿದೆ. ಈ ಕದನ ವಿರಾಮವನ್ನು ತ್ವರಿತಗೊಳಿಸಲು ನಾವು ಕಾರ್ಯನಿರ್ವಹಿಸುತ್ತೇವೆ. ರಷ್ಯಾ ಮತ್ತು ಉಕ್ರೇನ್​ ನಡುವಿನ ಭೀಕರ ಯುದ್ಧವನ್ನು ಕೊನೆಗೊಳಿಸಬೇಕಿದೆ. ಆಗ ನಾನು ಅಧ್ಯಕ್ಷನಾಗಿದ್ದಿದ್ದರೆ ಈ ಯುದ್ದವೇ ಪ್ರಾರಂಭವಾಗುತ್ತಿರಲಿಲ್ಲ. ಯುದ್ಧದಲ್ಲಿ ಅನೇಕ ಸೈನಿಕರು ಸಾವನ್ನಪ್ಪಿದ್ದಾರೆ. ಪುಟಿನ್​ ಮತ್ತು ಝೆಲನ್ಸ್ಕಿ ಇಬ್ಬರೂ ಯುದ್ದ ಕೊನೆಗೊಳಿಸಲು ಬಯಸಿದ್ದಾರೆ. ಈ ಪ್ರಕ್ರಿಯೆ ಇದೀಗ ಪೂರ್ಣ ಪ್ರಮಾಣದಲ್ಲಿದೆ. ಮಾನವೀಯತೆ ದೃಷ್ಟಿಯಿಂದ ನಾವು ಕೆಲಸ ಮಾಡುತ್ತೇವೆ" ಎಂದು ಟ್ರಂಪ್ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್