LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ: ರಾಜು ಕಾಗೆ

ಕಾಗವಾಡ: ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಿಕ್ಷಣ ಇಲಾಖೆಯಿಂದ ರೂ. ೩೬ ಲಕ್ಷ ಅನುದಾನದಲ್ಲಿ ಪಟ್ಟಣದ ಮರಾಠಿ ಶಾಲೆಯಲ್ಲಿ ೨ ನೂತನ ಕೋಣೆಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು.


ಅವರು ಸೋಮವಾರ ದಿ. ೦೮ ರಂದು ಪಟ್ಟಣದ ಮರಾಠಿ ಶಾಲೆಯ ಆವರಣದಲ್ಲಿ ನೂತನ ಕೋಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮಾತನಾಡುತ್ತಿದ್ದರು. ಸರ್ಕಾರಿ ಮರಾಠಿ ಶಾಲೆಯಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳು ಓದುತ್ತಿದ್ದು, ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ನಿರ್ಮಾಣಗೊಂಡಿತ್ತು. ಇದನ್ನು ಗಮನಿಸಿ, ನೂತನ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಕಟ್ಟಡ ಕಾಮಗಾರಿ ಗುಣಮಟ್ಟದಿಂದ ನಿರ್ಮಾಣಗೊಳ್ಳುವಂತೆ ಎಸ್‌ಡಿಎಂಸಿ ಸದಸ್ಯರು, ಪಾಲಕರು ನಿಗಾ ವಹಿಸಬೇಕು. ಮತ್ತು ಗುತ್ತಿಗೆದಾರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಬೇಕೆಂದು ತಾಕೀತು ಮಾಡಿದರು.


ಇನ್ನೂ ಇದೇ ವೇಳೆ ಉರ್ದು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೋಟಿಯನ್ನು ಉದ್ಘಾಟಿಸಿ, ಮಕ್ಕಳೊಂದಿಗೆ ಸಂವಾದ ಮಾಡಿದರು. ಉರ್ದು ಶಾಲೆಯ ಎಲ್ಲ ಶಿಕ್ಷಕರು ಎಸ್‌ಡಿಎಂಸಿ ಸದಸ್ಯರು ಶಾಸಕರನ್ನು ಸನ್ಮಾನಿಸಿ ಅಭಿನಂದಿಸಿದರು.


ಉರ್ದು ಶಾಲೆಯನ್ನು ಈಗಿರುವ ಪ್ರಾಥಮಿಕ ತರಗತಿಗಳನ್ನು ಪ್ರೌಢ ಶಿಕ್ಷಣದವರೆಗೆ ವಿಸ್ತರಿಸುವಂತೆ ಮನವಿ ಮಾಡಿಕೊಂಡರು. ಅದಕ್ಕೇ ಶಾಸಕರು ಸಕಾರಾತ್ಮವಾಗಿ ಸ್ಪಂದಿಸಿ, ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ನಿಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.


ಈ ಸಮಯದಲ್ಲಿ ಕೃಷ್ಣಾ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶಂಕರ ವಾಘಮೋಡೆ, ನಿರ್ದೇಶಕ ಸೌರವ ಪಾಟೀಲ, ಕಾಗವಾಡ ಪಿಕೆಪಿಎಸ್ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ರಮೇಶ ಚೌಗುಲೆ, ಪವನ ಪಾಟೀಲ, ಕಾಕಾ ಪಾಟೀ¯, ಚಿದಾನಂದ ಅವಟಿ, ಶಾಂತಿನಾಥ್ ಕರವ,  ಅಮೊಲ ವಡ್ಡರ,ಅವಿನಾಶ ದೇವಣೆ, ಉದಯ ಖೋಡೆ, ಮಲ್ಲಿಕಾರ್ಜುನ ಕಾಂಬ್ಳೆ   ಅಧಿಕಾರಿಗಳಾದ ಜಯಾನಂದ ಹಿರೇಮಠ, ಈರಣ್ಣಾ ವಾಲಿ, ಸಚೀನ ಗುರುವ, ಕೆ.ಕೆ. ಗುತ್ತಿಗೆದಾರರಾದ ಲಕ್ಷö್ಮಣ ವಡ್ಡರ, ಲಕ್ಷö್ಮಣ ಅವಳೆ, ಗಾವಡೆ, ಅಸ್ಲಂ ಮಕಾನದಾರ, ಶಖೀಲ ದ್ರಾಕ್ಷಿ, ಬಾಬು ಸೈಯದ, ಅಸ್ಲಮ ಜಮಾದಾರ, ಮೀರಾ ಮಕಾನದಾರ, ಹಮಜಾಖಾನ ಜಮಾದಾರ, ಮಲಿಕ ಮಕಾನದಾರ, ರಫೀಕ ಸಾರವಾನ,ಸೇರಿದಂತೆ  ಮರಾಠಿ ಮತ್ತು ಉರ್ದು ಶಾಲೆಯ ಮುಖ್ಯಾದ್ಯಪಕರು ಎಲ್ಲ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪಾಲಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್