ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ ಬಳಿಕ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಣಿ ಚೆನ್ನಭೈರಾದೇವಿಯ ಧೈರ್ಯ, ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ, ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಇದೊಂದು ಅವಿಸ್ಮರಣೀಯ ಘಟನೆ. ನಿಜವೇ ಎಂದು ಮೈ ಚಿವುಟಿ ನೋಡಿಕೊಳ್ಳಬೇಕಾದ ಸಂಗತಿ. ಏಕೆಂದರೆ ನನ್ನಂಥವರಿಗೆ ರಾಷ್ಟ್ರಪತಿ ಭವನವನ್ನು ಪ್ರವೇಶಿಸುವ ಅವಕಾಶವೇ ದೊಡ್ಡದು. ಇನ್ನು ಅವರನ್ನು ಸಮೀಪದಲ್ಲಿ ಕಾಣುವ ಭಾಗ್ಯ ಮತ್ತಷ್ಟು ಹಿರಿದಾದುದು ಎಂದಿದ್ದಾರೆ.