Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಅನಾಹುತಗಳ ಚರ್ಚೆಗೆ ಅವಕಾಶ ನೀಡಿದ್ದನ್ನು ಆಕ್ಷೇಪಿಸಿದ ಆರ್. ಅಶೋಕ್

ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಧರಣಿಯ ನಡುವೆಯೂ ಮಳೆ ಅನಾಹುತಗಳ ಚರ್ಚೆಗೆ ಅವಕಾಶ ನೀಡಿದ್ದನ್ನು ಆಕ್ಷೇಪಿಸಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅಜೆಂಡಾ ಕಾಪಿಯನ್ನು ಹರಿದು ಎಸೆದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.


ಮೈತ್ರಿಕೂಟ ಸದಸ್ಯರು ಸ್ಪೀಕರ್ ಅವರ ಮುಂದಿನ ಬಾವಿಗಿಳಿದು ಧರಣಿ ನಡೆಸುತ್ತಿದ್ದರು. ಎಷ್ಟೇ ಮನವಿ ಮಾಡಿದರೂ ಧರಣಿ ಕೈ ಬಿಡದ ಹಿನ್ನೆಲೆ ಸ್ಪೀಕರ್ ಯು. ಟಿ ಖಾದರ್ ಅವರು, ಮಳೆ ಅನಾಹುತಗಳ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ಇದನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಲ್ಲದೆ, ಅಜೆಂಡಾದಲ್ಲಿ ಇಲ್ಲದೇ ಇರುವ ವಿಚಾರಗಳ ಚರ್ಚೆಗೆ ಅವಕಾಶ ನೀಡಲಾಗಿದೆ. ನಿಯಮ ಬಾಹಿರವಾಗಿ ಕಲಾಪವಾಗುತ್ತಿದೆ. ಇತಿಹಾಸದಲ್ಲಿ ಈ ರೀತಿ ನಡೆದಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕಲಾಪ ಪಟ್ಟಿ ಕಾಗದವನ್ನು ಹರಿದು ಎಸೆದರು.


ಈ ನಡುವೆ ಕಾಂಗ್ರೆಸ್ ಶಾಸಕರು ಮಾತನಾಡುವಾಗ ಪ್ರತಿಬಾರಿಯೂ ಆರ್. ಅಶೋಕ್, ಕಲಾಪ ಕ್ರಮಬದ್ಧವಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸುತ್ತಾ ಬಂದರು. ಆದರೂ ಅದನ್ನು ಪರಿಗಣನೆಗೆ ತೆಗೆದುಕೊಳ್ಳದೇ ಯಥಾ ರೀತಿ ಕಲಾಪ ಮುಂದುವರೆದಿತ್ತು. ಮಳೆಗಾಲದ ಅನಾಹುತಗಳ ಬಗ್ಗೆ ಆಡಳಿತ ಪಕ್ಷದ ಶಾಸಕರು ಸುದೀರ್ಘ ಚರ್ಚೆ ನಡೆಸಿದರು.

Advertisement

 

 

 

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*