Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ: ಆರ್.ಅಶೋಕ ಆರೋಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಗುರುವಾರ ಆರೋಪಿಸಿದರು.

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದರು. ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ, ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ. ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಸಾರಿಗೆ ಇಲಾಖೆ ನೌಕರರು ಬಂದ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಬಕಾರಿ ಇಲಾಖೆ ಗುತ್ತಿಗೆದಾರರು ಕೂಡ ಬಂದ್‌ ಮಾಡಲು ಮುಂದಾಗಿದ್ದರು. ಈ ನಡುವೆ ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು. ಅಬಕಾರಿ ಇಲಾಖೆಯಲ್ಲಿ ಪರವಾನಗಿಗೆ ಅರ್ಜಿ ಸಲ್ಲಿಸಿದಾಗ ಲಂಚ ಕೇಳಿದ ಧ್ವನಿಮುದ್ರಣ ಈಗ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಕಾರ್ಯಕರ್ತ ಆಗಿರುವುದರಿಂದ 50% ರಿಯಾಯಿತಿ ಎಂದು ಅಧಿಕಾರಿ ಹೇಳಿದ್ದಾರೆ. ಇದು ಈಗ ಜಗಜ್ಜಾಹೀರಾಗಿದೆ ಎಂದು ಆರೋಪಿಸಿದ ಅವರು, ಈ ಭ್ರಷ್ಟಾಚಾರದ ವಿರುದ್ಧವೂ ಬಿಜೆಪಿ ಹೋರಾಟ ಮಾಡಲಿದೆ. ಇಷ್ಟು ಸಾಕ್ಷಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಪುಸ್ತಕ ಎಂದು ಹೇಳುತ್ತಿದ್ದಾರೆ. ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಅಶೋಕ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳದ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ವಯೋವೃದ್ಧರು ಸಾವನ್ನಪ್ಪಿರುವ ಬಗ್ಗೆ ಸಂಪೂರ್ಣ ತನಿಖೆಗೆ ಒತ್ತಾಯಿಸುವುದಾಗಿ ಅವರು ಪ್ರತಿಜ್ಞೆ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ