Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಮೇಲಿನ ಕೋಪಕ್ಕೆ ಡಿಕೆ ಸಹೋದರರ ಗೂಂಡಾಗಿರಿ: ಆರ್ ಅಶೋಕ ವಾಗ್ದಾಳಿ

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್  ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅಶೋಕ್, ಡಿಕೆ ಸಹೋದರರು ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.

‘ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತದಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ.

ಬಿಜೆಪಿ ಕಾರ್ಯಕರ್ತ‌ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ’ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ