Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ : ರಾಹುಲ್ ಗಾಂಧಿ ಭರವಸೆ

ಕೋಲಾರ, ಏಪ್ರಿಲ್ 18: ಬಿಜೆಪಿ ಸರ್ಕಾರವು ಬಡವರ ಮತ್ತು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸದ ಕಾರಣ ದೇಶದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ  ಬುಧವಾರ ಹೇಳಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರ ಪ್ರಚಾರ ನಡೆಸಿದ ರಾಹುಲ್ ಗಾಂಧಿ, ಸಂವಿಧಾನಕ್ಕೆ ಧಕ್ಕೆ ಉಂಟಾಗಿದ್ದು, ಇಂಡಿಯಾ ಮೈತ್ರಿಕೂಟವನ್ನು ಅಧಿಕಾರಕ್ಕೆ ತರದಿದ್ದರೆ ಜನತೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ. ಜತೆಗೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ  ನಡೆಸಲಾಗುವುದು. ಇದರಿಂದ ಅಗತ್ಯವಿರುವವರಿಗೆ ಪ್ರಯೋಜನವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಕೋಲಾರದ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್‌ಗೆ (ಬಿಜಿಎಂಎಲ್) ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ.

ದೇಶದಲ್ಲಿ ಪಕ್ಷಪಾತ ತಾಂಡವವಾಡುತ್ತಿದ್ದು, ಎನ್‌ಡಿಎ ಸರ್ಕಾರದಲ್ಲಿ ಕೇವಲ 20 ಉದ್ಯಮಿಗಳು 70 ಕೋಟಿ ಜನರ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋದಿ ಸರಕಾರ ಆಯ್ದ ಉದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದೆ. ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಯಾವುದೇ ಹಂತಕ್ಕೂ ಹೋಗುತ್ತಾರೆ ಎಂದು ಅವರು ಟೀಕಿಸಿದ್ದಾರೆ.

ಪ್ರಭಾವಿ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ಪ್ರಧಾನಿ ಬಳಸಿಕೊಳ್ಳುತ್ತಿರುವುದು ಸಾಬೀತಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದಲಿತ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಶೇ 90 ಕ್ಕೂ ಹೆಚ್ಚು ಜನರಿಗೆ ಯಾವುದೇ ಕ್ಷೇತ್ರದಲ್ಲಿ ಅವಕಾಶ ದೊರೆಯುತ್ತಿಲ್ಲ. ಇದು ಈ ಸರಕಾರವು ದೀನದಲಿತರು ಮತ್ತು ಕಷ್ಟದಲ್ಲಿರುವವರ ಪರವಾಗಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ. ಅಧಿಕಾರಕ್ಕೆ ಬಂದರೆ, ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ಒದಗಿಸಲು ಕಾಂಗ್ರೆಸ್ ಕ್ರಾಂತಿಕಾರಕ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ