LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯಾದ್ಯಂತ ಮಳೆ: ಜನರ ಮೊಗದಲ್ಲಿ ಮಂದಹಾಸ

ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಮಳೆ : ಹವಾಮಾನ ಇಲಾಖೆ

ಬೆಂಗಳೂರು ಏ., ೨೦- ಕಳೆದ ೪-೫ ವರ್ಷದಿಂದ ಬೆಂಗಳೂರು & ಕರ್ನಾಟಕದ ಜನರನ್ನು ಬೆಚ್ಚಿ ಬಿಳಿಸಿದ್ದ ಭಾರಿ ಮಳೆ ಕಳೆದ ವರ್ಷ ನಾಪತ್ತೆ ಆಗಿತ್ತು. ಬೇಸಿಗೆ ಸಮಯದಲ್ಲಿ ಬಿದ್ದು ಕರ್ನಾಟಕಕ್ಕೆ ತಂಪೆರದಿದ್ದ ಒಂದೆರಡು ಮಳೆ ಮಾತ್ರ, ಆದರೆ ಜೂನ್ ತಿಂಗಳಲ್ಲೇ ಕರ್ನಾಟಕದಲ್ಲಿ ಮಳೆ ಕೊರತೆ ಉಂಟಾಗಿ ಆತಂಕ ಹುಟ್ಟಿಸಿತ್ತು. ಈ ವರ್ಷ ಮುಂಗಾರು ಮಳೆಯ ಮಳೆಯ ಅಬ್ಬರ ಶುರುವಾಗಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಮುಂಗಾರು ಮಳೆ ಕೈಕೊಟ್ಟ ಕಾರಣ ೨೦೨೩ ರಲ್ಲಿ ಬರದ ಬೇಗೆಯಲ್ಲಿ ಕರ್ನಾಟಕ ಜನರು ಬೆಂದು ಹೋಗಿ ನೀರಿಗಾಗಿ ಪರದಾಡಿದ್ದಾರೆ. ಕಳೆದ ವರ್ಷ ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ಈ ಬಾರಿ ಬೇಸಿಗೆ ಆರಂಭಕ್ಕೆ ಮೊದಲೇ, ಹನಿ ಹನಿ ನೀರಿಗೂ ಪರದಾಟ ಶುರುವಾಗಿತ್ತು. ಕುಡಿವ ನೀರು ಒದಗಿಸಲು ಸರ್ಕಾರ ಪರದಾಡುತ್ತಿದೆ. ಹೀಗಿದ್ದಾಗ ಮಳೆರಾಯ ಕನ್ನಡಗರ ಮೇಲೆ ಕರುಣೆ ತೋರಿಸಿ ಮಳೆ ಬರಿಸಿದ್ದಾನೆ.
ಮಳೆ.. ಮಳೆ.. ಕರ್ನಾಟಕದಲ್ಲಿ ಮಳೆ!
ಕರ್ನಾಟಕದ ಕರಾವಳಿ ಜಿಲ್ಲೆಯು ಸೇರಿದಂತೆ ಬೆಂಗಳೂರು ನಗರ & ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಕರ್ನಾಟಕದ ವಿದ್ಯಾಕಾಶಿ ಧಾರವಾಡ & ಹುಬ್ಬಳ್ಳಿಯಲ್ಲಿ ಭಾರಿ ಮಳೆ ತಂಪೆರದಿದ್ದು, ಗದಗ ಜಿಲ್ಲೆಯ ಜನರು ಕೂಡ ಭಾರಿ ಮಳೆಯಿಂದ ಖುಷಿಯಾಗಿ ಕುಣಿದಾಡಿದ್ದಾರೆ.

ಕರ್ನಾಟಕದ ಹಾಸನ, ಕೊಡಗು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆಯು ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗುತ್ತಿದ್ದು, ಈ ಮೂಲಕ ನೆಮ್ಮದಿ ಮೂಡಿದೆ. ಕರಾವಳಿಯ ಪ್ರದೇಶಗಳು ಸೇರಿ ಈಗ ಉತ್ತರ ಕನ್ನಡ, ದಕ್ಷಿಣ ಕನ್ನಡ & ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗದ ಹಲವು ತಾಲೂಕುಗಳು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಮಳೆ ಆರ್ಭಟಿಸಿದೆ.
ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಏ.೨೨ ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್