Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದನದಲ್ಲಿ ರಾಜಣ್ಣ ವಜಾ ಪ್ರತಿಧ್ವನಿ; ಕಾರಣಕ್ಕಾಗಿ ವಿಪಕ್ಷಗಳ ಪಟ್ಟು


ಬೆಂಗಳೂರು: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ. ಎನ್‌. ರಾಜಣ್ಣ ಅವರ ವಿಷಯ ಪ್ರಸ್ತಾಪವಾಯಿತು‌.


ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಹಕಾರ ಸಚಿವರಾಗಿದ್ದ ಕೆ. ಎನ್. ರಾಜಣ್ಣ ಅವರು ಸಚಿವ ಸ್ಥಾನದಿಂದ ವಜಾಗೊಂಡಿರುವ ಕುರಿತ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸಹಿಯಿರುವ ಪತ್ರ ಓದಲು ಮುಂದಾದರು.‌ ಇದಕ್ಕೆ ಆಡಳಿತ ಪಕ್ಷದ ಸಚೇತಕ ಸಲೀಂ ಅವರು ಆಕ್ಷೇಪ ವ್ಯಕ್ತಪಡಿಸಿದರು.


ಪ್ರಶೋತ್ತರ ಅವಧಿ ಮುಗಿದ ಬಳಿಕ ಮಾತನಾಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದರು. ತುರ್ತು ವಿಷಯವಾಗಿದ್ದು, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಯಾಕೆ ವಜಾ ಮಾಡಿದರು ಎಂದು ಛಲವಾದಿ ನಾರಾಯಣ ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸದಸ್ಯರಾದ ಸಿ. ಟಿ‌. ರವಿ. ರವಿಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಧ್ವನಿಗೂಡಿಸಿದರು.


ವಿಪಕ್ಷ ಸದಸ್ಯರ ಮಾತಿಗೆ ವಿರೋಧಿಸಿದ ಆಡಳಿತ ಪಕ್ಷದ ನಾಯಕರು, ರಾಜಣ್ಣ ಅವರ ಮೇಲೆ ಯಾವತ್ತಿನಿಂದ ಪ್ರೀತಿ ಬಂತು ಎಂದು ವ್ಯಂಗ್ಯವಾಡಿದರು‌.‌ ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ 10 ನಿಮಿಷ ಕಲಾಪವನ್ನು ಸಭಾಪತಿ ಅವರು ಮುಂದೂಡಿದರು.


ಸಭಾನಾಯಕರು ಬಂದ ಬಳಿಕ ಉತ್ತರ: ಸದನ ಮತ್ತೆ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರನ್ನು ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಜಾಗೊಳಿಸಲು ಕಾರಣವೇನು? ಭ್ರಷ್ಟಾಚಾರದಲ್ಲಿ ಅವರು ತೊಡಗಿಸಿಕೊಂಡಿದ್ದಾರೆಯೇ ಎಂದು ಛಲವಾದಿ ಅವರು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಂದ ಅಥವಾ ಸಭಾ ನಾಯಕರಿಂದ ಉತ್ತರ ಕೊಡಿಸಿ ಎಂದು ಪಟ್ಟು ಹಿಡಿದರು. ಸಭಾ ನಾಯಕರು ಸದನಕ್ಕೆ ಬಂದಿಲ್ಲ. ಬಂದ ಬಳಿಕ ಅವರಿಂದ ಉತ್ತರ ಕೊಡಿಸಲಾಗುವುದು ಸಭಾಪತಿ ಅವರು ಭರವಸೆ ನೀಡಿದ್ದರಿಂದ ವಿಪಕ್ಷ ನಾಯಕರು ಸುಮ್ಮನಾದರು.












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ