Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಶೇಖರ್ ಕೊಳ್ಳಿಮಠ ಅವರ ‘ಇಂಗ್ಲಿಷ್ ಮೇಡ್ ಈಸಿ’ ತೃತೀಯ ಆವೃತ್ತಿ ಬಿಡುಗಡೆ





ಬೆಳಗಾವಿ. ಸ್ಥಳೀಯ ಸಪ್ನಾ ಬುಕ್ ಹೌಸ್‌ನಲ್ಲಿ ಏಪ್ರಿಲ್ 5 ರಂದು ನಡೆದ ಭವ್ಯ ಸಮಾರಂಭದಲ್ಲಿ ಲೇಖಕ ರಾಜಶೇಖರ್ ಕೊಳ್ಳಿಮಠ ಅವರ ಇಂಗ್ಲಿಷ್ ಮೇಡ್ ಈಸಿ (English Made Easy) ಪುಸ್ತಕದ ತೃತೀಯ ಆವೃತ್ತಿಯನ್ನು ಯಶಸ್ವಿಯಾಗಿ ಲೋಕಾರ್ಪಣೆಗೊಳಿಸಲಾಯಿತು.
ಗಣ್ಯರ ಉಪಸ್ಥಿತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದತ್ತಾ ಫೈನಾನ್ಶಿಯಲ್ ಸರ್ವಿಸಸ್‌ನ ಶ್ರೀಮತಿ ಅನಿತಾ ದತ್ತಾ ಆಗಮಿಸಿದ್ದರು, ಗೌರವಾನ್ವಿತ ಅತಿಥಿಗಳಾಗಿ ಶ್ರೀಮತಿ ಶಿಲ್ಪಾ ಖಡಕಭಾವಿ ಹಾಗೂ ಚೈತನ್ಯ ಹಲಗೇಕರ ಉಪಸ್ಥಿತರಿದ್ದು, ಕೃತಿಯನ್ನು ಅನಾವರಣಗೊಳಿಸಿದರು. ಮೃಣಾಲಿನಿ ಇಂಗ್ಲಿಷ ಅಕಾಡೆಮಿ ಮತ್ತು ಕೋರಾ ಟೆಕ್ನಾಲಜೀಸ್‌ನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪುಸ್ತಕ ಪ್ರೇಮಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಭಾಷಾ ಪ್ರೌಢಿಮೆಯ ಕುರಿತು ಅತಿಥಿಗಳ ನುಡಿ,
ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು ಲೇಖಕರ ಶ್ರಮವನ್ನು ಶ್ಲಾಘಿಸಿದರು.
ಚೈತನ್ಯ ಹಲಗೇಕರ ಮಾತನಾಡಿ  ಒಬ್ಬ ಲೇಖಕನ ಜೀವನದ ಅನುಭವಗಳು ಮತ್ತು ಕಠಿಣ ಪರಿಶ್ರಮ ಹೇಗೆ ಒಂದು ಉಪಯುಕ್ತ ಪುಸ್ತಕವಾಗಿ ರೂಪುಗೊಳ್ಳುತ್ತದೆ ಎಂಬುದನ್ನು ಅವರು ಭಾವನಾತ್ಮಕವಾಗಿ ವಿವರಿಸಿದರು.
ಅನಿತಾ ದತ್ತಾ ಮಾತನಾಡಿ  ಕೇವಲ ಹಿಂದಿ ಭಾಷೆ ಮಾತ್ರ ತಿಳಿದಿದ್ದ ತಾವು, ನಂತರದ ದಿನಗಳಲ್ಲಿ ಕನ್ನಡ, ಇಂಗ್ಲಿಷ್, ಮರಾಠಿ, ತಮಿಳು ಮತ್ತು ತೆಲುಗು ಭಾಷೆಗಳನ್ನು ಹೇಗೆ ಕರಗತ ಮಾಡಿಕೊಂಡೆ ಎಂಬ ತಮ್ಮ ಸ್ಫೂರ್ತಿದಾಯಕ ಪಯಣವನ್ನು ಹಂಚಿಕೊಂಡರು. "ನಿರಂತರ ಅಭ್ಯಾಸವಿದ್ದರೆ ಯಾರೂ ಬೇಕಾದರೂ ಯಾವುದೇ ಭಾಷೆಯನ್ನು ಕಲಿಯಬಹುದು" ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಿಲ್ಪಾ ಖಡಕಭಾವಿ ಮಾತನಾಡಿ  ಕಾರ್ಯಕ್ರಮಕ್ಕೆ ಕಲಾತ್ಮಕ ಸ್ಪರ್ಶ ನೀಡಿದ ಶಿಲ್ಪಾ ಅವರು ಸಂವಹನ ಕಲೆಯಲ್ಲಿ ಪುಸ್ತಕಗಳ ಮಹತ್ವದ ಬಗ್ಗೆ ಮಾತನಾಡಿದರು.
ಸಾರ್ವಜನಿಕರ ಬೆಂಬಲ ಬೆಳಗಾವಿಯ ಜನತೆ ಹಾಗೂ ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಇಂಗ್ಲಿಷ ಭಾಷೆಯನ್ನು ಸುಲಭವಾಗಿ ಕಲಿಯಲು ಬಯಸುವವರಿಗೆ ಈ ಪುಸ್ತಕವು ದಾರಿದೀಪವಾಗಲಿ ಎಂದು ಹಾರೈಸಲಾಯಿತು.
ಕೊನೆಯಲ್ಲಿ ಲೇಖಕ ರಾಜಶೇಖರ ಕೊಳ್ಳಿಮಠ ಅವರು ತಮ್ಮ ಈ ಯಶಸ್ಸಿಗೆ ಕಾರಣರಾದ ಕುಟುಂಬಸ್ಥರು, ಸ್ನೇಹಿತರು ಮತ್ತು ಬೆಳಗಾವಿಯ ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ