Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಯಿಂದ ರಜನೀಕಾಂತ್ ಡಿಸ್​ಚಾರ್ಜ್; ವಿಶ್ರಾಂತಿಗೆ ಸೂಚನೆ

ಕೆಲ ದಿನದ ಹಿಂದೆ ಹೃದಯ ಸಮಸ್ಯೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನೀಕಾಂತ್ ನಿನ್ನೆ ತಡರಾತ್ರಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿ ಮನೆ ಸೇರಿದ್ದಾರೆ. ಐದು ದಿನಗಳ ಹಿಂದೆ ಸೆಪ್ಟೆಂಬರ್ 30 ರಂದು ಎದೆ ನೋವು ಕಾಣಿಸಿಕೊಂಡ ಕಾರಣ ರಜನೀಕಾಂತ್ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಹಾಗೂ ವಿಶ್ರಾಂತಿಯ ಬಳಿಕ ನಿನ್ನೆ (ಅಕ್ಟೋಬರ್ 03) ರಾತ್ರಿ 11 ಗಂಟೆ ವೇಳೆಗೆ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ರಜನೀಕಾಂತ್ ಡಿಸ್​ಚಾರ್ಜ್ ಆಗಿರುವ ಮಾಹಿತಿಯನ್ನು ಚೆನ್ನೈ ಪೊಲೀಸರು ಹಂಚಿಕೊಂಡಿದ್ದಾರೆ.

ಸೆಪ್ಟೆಂಬರ್ 30 ರಂದು ರಜನೀಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ವೈದ್ಯರು, ರಜನೀಕಾಂತ್​ರ ಹೃದಯದಲ್ಲಿ ಸಮಸ್ಯೆ ಉಂಟಾಗಿರುವುದನ್ನು ಪತ್ತೆ ಹಚ್ಚಿದ್ದರು. ರಜನೀಕಾಂತ್​ರ ಹೃದಯದ ದೊಡ್ಡ ನಾಳದಲ್ಲಿ ಊತ ಬಂದಿತ್ತು, ಅದು ಹೆಚ್ಚಾಗಿ ರಕ್ತನಾಳವೇ ಒಡೆಯುವ ಅಪಾಯವಿತ್ತು, ಹಾಗಾಗಿ ಅಪೋಲೊ ಆಸ್ಪತ್ರೆ ವೈದ್ಯರು ಊದಿಕೊಂಡಿದ್ದ ರಕ್ತನಾಳಕ್ಕೆ ಸ್ಟಂಟ್ ಅಳವಡಿಸಿದ್ದರು. ಈ ಕ್ರಿಯೆಯನ್ನು ಶಸ್ತ್ರಚಿಕಿತ್ಸೆ ಇಲ್ಲದೆಯೇ ವೈದ್ಯರು ಮಾಡಿದ್ದರು.

ಸ್ಟಂಟ್ ಅಳವಡಿಕೆ ಬಳಿಕ ಐಸಿಯುನಲ್ಲಿರಿಸಿ ಅವರ ಹೃದಯದ ಕಾರ್ಯ, ಒಟ್ಟಾರೆ ದೇಹದ ಆರೋಗ್ಯದ ಮೇಲೆ ನಿಗಾವಹಿಸಿದ್ದ ವೈದ್ಯರು, ಅಕ್ಟೋಬರ್ 03 ರ ರಾತ್ರಿ 11 ಗಂಟೆಗೆ ಅವರನ್ನು ಆಸ್ಪತ್ರೆಯಿಂದ ಬೀಳ್ಕೊಟ್ಟಿದ್ದಾರೆ. ಸ್ಟಂಟ್ ಅಳವಡಿಸಿರುವ ಕಾರಣ ಕೆಲವು ದಿನಗಳ ಕಾಲ ರಜನೀಕಾಂತ್​ಗೆ ವಿಶ್ರಾಂತಿಯ ಅಗತ್ಯವಿದೆ ಎನ್ನಲಾಗುತ್ತಿದೆ. ರಜನೀಕಾಂತ್ ಪ್ರಸ್ತುತ ‘ಕೂಲಿ’ ಸಿನಿಮಾದಲ್ಲಿ ನಟಿಸುತ್ತಿದ್ದು, ಮತ್ತೆ ಚಿತ್ರೀಕರಣಕ್ಕೆ ಬರಲು ತುಸು ಹೆಚ್ಚು ದಿನಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ