ಬಳ್ಳಾರಿ: 22.ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ದೇಶದ ಆಧುನಿಕ ಭಾರತ ನಿರ್ಮಾಣಕ್ಕೆ ರಾಜೀವ್ ಗಾಂಧಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಕ್ರಾಂತಿಗೆ ಅಡಿಗಲ್ಲು ಹಾಕಿದ ನಾಯಕನಾಗಿ ಅವರು ದೇಶದ ಅಭಿವೃದ್ಧಿಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಾನಯ್ಯ, ವಿರಸೇನಾ ರೆಡ್ಡಿ, ಕ್ರೈಸ್ತ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ಜಿ.ಜೆ. ರವಿಕುಮಾರ್, ಡಿಸಿಸಿ ಕಾರ್ಯಾಧ್ಯಕ್ಷ ಬೊಯಪಾಟಿ ವಿಷ್ಣುವರ್ಧನ್, ಡಿಸಿಸಿ ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಪ್ರಧಾನ ಕಾರ್ಯದರ್ಶಿ ಆಯಾಜ್ ಅಹಮ್ಮದ್, ನಗರ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಈರಣ್ಣ ಗೌಡ, ಕೆಪಿಸಿಸಿ ವಕ್ತಾರ ಬಿ.ಎಂ. ಪಾಟೀಲ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಎರುಕುಲ ಸ್ವಾಮಿ, ಅಲಿವೇಲು ಸುರೇಶ್, ಧನುಂಜಯ್ ಹಮಲ್, ಶ್ರೀಕಾಂತ್, ಅತ್ತಾವುಲ್ಲ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಡಿಸಿಸಿ ಕಾರ್ಯಕಾರಿಣಿ ಸದಸ್ಯ ವೆಂಕಟಲಕ್ಷ್ಮಿ ನಾರಾಯಣ, ಮುಖಂಡರಾದ ಬಿ.ಎ. ಮಲ್ಲೇಶ್ವರಿ, ಪರ್ವಿನ್ ಭಾನು, ಗೋನಾಳ್ ನಾಗಭೂಷಣ ಗೌಡ, ವಿಜಯ್, ಲಿಂಗರಾಜು ಹಾಗೂ ಇತರರು ಉಪಸ್ಥಿತರಿದ್ದರು.
