Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತಂಜಲಿ ಯೋಗ ಸಮಿತಿ ವತಿಯಿಂದ ರಕ್ಷಾ ಬಂಧನ ಆಚರಣೆ

ಗದಗ 19: ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ದಿನಾಂಕ: ೧೯-೦೮-೨೦೨೪ ರಂದು ಬೆಳಿಗ್ಗೆ ೫-೩೦ ರಿಂದ ೬-೩೦ ರವರೆಗೆ ಯೋಗ ಅಭ್ಯಾಸವನ್ನು ಮಾಡಿಸಲಾಯಿತು.

ಗದಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಗಿರಿಯಪ್ಪ ಮಡಿವಾಳರ ಇವರು ರಕ್ಷಾ ಬಂಧನ ಹಬ್ಬದ ಬಗ್ಗೆ ತಿಳಿಸಿದರು. ಶ್ರಾವಣ ಮಾಸದ ನೂಲು ಹುಣ್ಣಿಮೆಯ ದಿನ ಆಚರಿಸುವ ಹಬ್ಬವೇ ರಕ್ಷಾ
ಬಂಧನ ಹಬ್ಬ. ಸಹೋದರಿಯರು, ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ನಿಮಗೆ ಏನೇ ಕಷ್ಟ ಬಂದರೂ ರಕ್ಷಣೆಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.

ಖಜಾಂಚಿಯಾದ ಶ್ರೀ ಕೆ.ಎಸ್. ಗುಗ್ಗರಿಯವರು ಸಹ ಅಣ್ಣ- ತಂಗಿಯರ ಬಾಂಧವೈದ ಬಗ್ಗೆ ತಿಳಿಸಿದರು. ಶ್ರೀ ಎಸ್.ಎನ್. ಬಳ್ಳಾರಿಯವರು ಸಹ ರಕ್ಷಾ ಬಂಧನದ ಬಗ್ಗೆ ಸವಿಸ್ತಾರವಾಗಿ
ತಿಳಿಸಿದರು. ಶ್ರೀ ಸದಾನಂದ ಕಾಮತ ಇವರು ಸಹ ರಕ್ಷಾ ಬಂಧನದ ಬಗ್ಗೆ ಮಾತನಾಡಿದರು. ಮಹಿಳಾ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶೋಭಾ
ಗುಗ್ಗರಿಯವರು ರಕ್ಷಾ ಬಂಧನ ಹಬ್ಬದ ಅಣ್ಣ-ತಂಗಿಯರ ಬಾಂಧವೈದ ಬಗ್ಗೆ ತಿಳಿಸಿದರು.

ಎಲ್ಲ ಸಹೋದರಿಯರು  ಸಹೋದರರಿಗೆ ರಾಖಿಯನ್ನು ಕಟ್ಟಿದರು. ರಕ್ಷಾ ಬಂಧನ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಇವತ್ತಿನ ಕಾರ್ಯಕ್ರಮದಲ್ಲಿ ಬಸವರಾಜ ಹಿರೇಮಠ, ಅಪ್ಪಣ್ಣ ಮಠದ, ರವಿ ಬೆಂಗಳೂರು, ವೆಂಕಣ್ಣ ಮೆರೋಡಿ, ಶಂಕರ ಕೆಟಗೇರಿ, ಲದ್ವಾ, ಲಕ್ಷ್ಮಣ ಹಾಗೂ ಲಕ್ಷ್ಮೀ ಗುರಿಕಾರ, ಲತಾ ಮಾನೆ, ಶಶಿಕಾಲ ಹಡಗಲಿಮಠ, ಶೋಭಾ ಬೆಂಗಳೂರು, ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರು, ಯೋಗ ಸಾಧಕರು, ಅಣ್ಣ-ತಂಗಿಯರು,ಮುಂತಾದವರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ