Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಮೇಶ ಅರವಿಂದ್ ಚಿತ್ರ ದೈಜಿ ಸೆಳೆಯುತ್ತಿದೆ ಟೀಸರ್



       "ಹುಟ್ಟು - ಸಾವು ಬಾಳಿನಲ್ಲಿ ಎರಡು ಕೊನೆಗಳು ಎಂಬ ಸಾಲಿದೆ. ಆದರೆ ಇವೆರಡರ ಮಧ್ಯೆ ಏನಿದೆ? ಇವೆರಡರ ಮಧ್ಯೆ ಪ್ರೀತಿ ಇದೆ. ಒಂದು ವೇಳೆ ಸಾವೇ ಕೊನೆಯಾಗದಿದ್ದರೆ ಏನಿರುತ್ತದೆ?  ಅದರ ಆಚೆಗೆ ಒಂದು ದುಷ್ಟ ಶಕ್ತಿ ಇರುತ್ತದೆ. ಆ ಶಕ್ತಿ ಈ ಪ್ರೀತಿಯನ್ನು ಹೊತ್ತುಕೊಂಡು ಹೊಗುತ್ತದೆ. ಇದೇ ನಾವು ಸಾಮಾನ್ಯ ಹಾರಾರ್ ಚಿತ್ರಗಳಲ್ಲಿ ಕಾಣುವುದು. ಆದರೆ ನಿರ್ದೇಶಕ ಆಕಾಶ್ ಶ್ರೀವತ್ಸ ದೈಜಿ ಚಿತ್ರವನ್ನು  ಈ ರೀತಿಯ ಹಾರಾರ್ ಸಿನಿಮಾ ಮಾಡಿಲ್ಲ" ಎಂದು ಮಹಾನ್ ನಟ ರಮೇಶ್ ಅರವಿಂದ್ ಅವರು ತಿಳಿಸಿದರು.


     ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ  ರಮೇಶ್ ಅರವಿಂದ್ ಅವರ ಹುಟ್ಟುಹಬ್ಬಕ್ಕೆ  ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ 'ದೈಜಿ' ಚಿತ್ರದ ಟೀಸರ್ ಬಿಡುಗಡೆ ಮಾಡಿ
ಚಿತ್ರತಂಡ ತಮ್ಮ ನಾಯಕನಿಗೆ  ಶುಭಾಶಯ ತಿಳಿಸಿದೆ.

     ಈ ಸಂದರ್ಭದಲ್ಲಿ ರಮೇಶ್ ಅರವಿಂದ್  ಅವರು ಮಾತನಾಡಿದರು.



"ಈವರೆಗೂ ನಾನು ಸಾಕಷ್ಟು ಹಾರಾರ್ ಸಿನಿಮಾ ನೋಡಿದ್ದೇನೆ. ಆದರೆ ಈ ರೀತಿ ಕಥೆ ನಾನು ನೋಡಿಲ್ಲ. ಅಂತಹ ಚಿತ್ರ ಮಾಡಿದ್ದಾರೆ ನಿರ್ದೇಶಕ ವತ್ಸ ಅವರು. ನಾನು ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ.  ಇನ್ನೂ, ನಿರ್ಮಾಪಕ ರವಿ ಕಶ್ಯಪ್ ಅವರ ಸಿನಿಮಾ ಪ್ರೀತಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ರಾಧಿಕಾ ನಾರಾಯಣ್ ಅವರಂತೂ ಮಹಾನಟಿ. ದಿಗಂತ್ ಅವರ ಲವಲವಿಕೆ ನನಗೆ ಬಹಳ ಇಷ್ಟ. ಈ ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. ಆದಷ್ಟು ಬೇಗ 'ದೈಜಿ' ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರ‌ನಾಗಿದ್ದೇನೆ ಎಂದು  ಹೇಳಿದರು.

       ನಿರ್ಮಾಪಕ ರವಿ ಕಶ್ಯಪ್ "ಹತ್ತು ವರ್ಷಗಳ ಹಿಂದೆ ನಾನು‌, ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಈ ಚಿತ್ರದ ಬಗ್ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ಇದು ವಿದೇಶದಲ್ಲಿ ನಾನು ಕಂಡಿರುವ ನೈಜ ಘಟನೆ ಆಧಾರಿತ ಚಿತ್ರ. ಯಾವುದೇ ಹಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲದಂತೆ ಮೂಡಿಬಂದಿರುವ ನಮ್ಮ 'ದೈಜಿ' ಚಿತ್ರವನ್ನು ಕೆಲವೆ ದಿನಗಳಲ್ಲಿ ನಿಮ್ಮ ಮುಂದೆ ತರುತ್ತೇವೆ" ಎಂದರು.


     "ನಿರ್ಮಾಪಕ ಹೇಳಿದ ನೈಜ ಘಟನೆಯ ಈ ಕಥೆಯೇ 'ದೈಜಿ' ಚಿತ್ರಕ್ಕೆ ಸ್ಪೂರ್ತಿ. ನಂತರ ಈ ಕಥೆಗೆ ರಮೇಶ್ ಅರವಿಂದ್ ಅವರೇ ಸೂಕ್ತ ಎನಿಸಿ, ಅವರಿಗೆ ಕಥೆ ಹೇಳಿದಾಗ, ನಟಿಸಲು ಒಪ್ಪಿಕೊಂಡಿದ್ದು ಬಹಳ ಖುಷಿಯಾಯಿತು. ಸೂರ್ಯ ಎಂಬ ಪಾತ್ರದಲ್ಲಿ ರಮೇಶ್ ಅವರು ಕಾಣಿಸಿಕೊಂಡಿದ್ದಾರೆ.  ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ ಹಾಗೂ ರಮೇಶ್ ಅವರ ತಮ್ಮನಾಗಿ ನಟ ದಿಗಂತ್, ಗಗನ್ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. 'ದೈಜಿ' ಎಂದರೆ ಪ್ರೇತಾತ್ಮಗಳ ದೈವ ಎಂದರ್ಥ" ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದರು.

     ನಟಿ ರಾಧಿಕಾ ನಾರಾಯಣ್ ಹಾಗೂ  ದಿಗಂತ್ ತಮ್ಮ ಪಾತ್ರಗಳ ಬಗ್ಗೆ,  ಚಿತ್ರದಲ್ಲಿ ನಟಿಸಿರುವ ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದವರು "'ದೈಜಿ' ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ