Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯವಂತ ಸಮಾಜ ಕಟ್ಟಲು ಪ್ರತಿಯೊಬ್ಬರು ಕೈಜೋಡಿಸಿ: ರಮೇಶ ಬುಲೆಬುಲೆ

ಅಥಣಿ: ನಮ್ಮ ಸುತ್ತಮುತ್ತಲಿನ ಪರಿಸರವನ್ನು  ಸಂರಕ್ಷಣೆ ಮಾಡುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ಕಟ್ಟಲು ಅನೇಕ ಸಂಘ-ಸAಸ್ಥೆಗಳು ಶ್ರಮಿಸುತ್ತಿವೆ. ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಅಥಣಿ ಪಟ್ಟಣದಲ್ಲಿ ಆರಂಭಗೊAಡ ನಂತರ ಅನೇಕ ಸಾಮಾಜಿಕ ಸೇವೆಗಳನ್ನು ನೀಡುವ ಸಂಕಲ್ಪ ಹೊಂದಿದ್ದೇವೆ. ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳುವ ಆರೋಗ್ಯ ತಪಾಸಣಾ ಶಿಬಿರ ಮತ್ತು ಜನಜಾಗ್ರತಾ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅಥಣಿ ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ ಬುಲಬುಲೆ  ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಆರಂಭೋತ್ಸವದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಅವರು ಆರೋಗ್ಯವಂತ ಸಮಾಜವನ್ನು ಕಟ್ಟುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಬಹಳ ಮುಖ್ಯ. ಲಯನ್ಸ್ ಕ್ಲಬ್ ವತಿಯಿಂದ  ಉಚಿತ ಆರೋಗ್ಯ ಶಿಬಿರಗಳನ್ನು, ದುಶ್ಚಟಗಳಿಂದ ಆಗುವ ಪರಿಣಾಮಗಳ ಜಾಗೃತಿಗೆ ನಮ್ಮ ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಇರುವುದರಿಂದ ಆರೋಗ್ಯಕ್ಕೆ ಸಂಬAಧಿಸಿದ ಶಿಬಿರಗಳನ್ನು ಮತ್ತು ಕಾರ್ಯಕ್ರಮಗಳ ನಡೆಸಲು ಸಹಕಾರಿಯಾಗಿದೆ. ಮುಂಬರುವ ದಿನಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಪರಿಸರ ಸೇರಿದಂತೆ ಇನ್ನಿತರ ವಲಯಗಳಲ್ಲಿ ಲಯನ್ಸ್ ಕ್ಲಬ್ ವಿವಿಧ ಸೇವೆಗಳನ್ನು ಸಲ್ಲಿಸಲಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್  ಉಪಾಧ್ಯಕ್ಷ ಆನಂದ ಟೋಣಪಿ, ಕಾರ್ಯದರ್ಶಿ ವಿನೋದ ಕನಮಡಿ ಮಾತನಾಡಿದರು
ಈ ವೇಳೆ ಖಜಾಂಚಿ ಅಶೋಕ ಹೊಸೂರ, ಶಶಿಕಾಂತ ಹುಲಕುಂದ, ಮೋಹನ ಕಾಂಬಳೆ, ವೈಭವ ಐಹೊಳೆ, ರೆಹಾನ್ ಡಾಂಗೆ, ಅನಿಲ ಪಾಟೀಲ, ಬಸವರಾಜ ಬಾವಣ್ಣವರ, ಕಿರಣ ಶಿರಗುಪ್ಪಿ, ತಾಲೂಕಾ ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ, ಡಾ. ಮಹೇಶ್ ಕಾಪಸೆ, ಡಾ. ಜಿ ಎಸ್ ಪಾಟೀಲ, ಡಾ.ಸಂಗಮೇಶ  ಮಮದಾಪುರ, ಡಾ. ಸಿ ಎಸ್ ಪಾಟೀಲ, ಡಾ. ಸಂಜು ಕುಮಾರ ಗುಂಜಿಗಾವಿ ಸೇರಿದಂತೆ  ಅಥಣಿ ಲಯನ್ಸ್ ಕ್ಲಬ್ ನ ಸದಸ್ಯರು  ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ