Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಜನೆಗಳ ಸದ್ಬಳಕೆಗೆ ಸಾರ್ವಜನಿಕರ ಸಹಕಾರ ಮುಖ್ಯ : ರಮೇಶ್ ಕತ್ತಿ ಅಭಿಮತ



 *ಹುಕ್ಕೇರಿ* : ಗ್ರಾಮಗಳ ಅಭಿವೃದ್ಧಿಗೆ ಮುಖಂಡರ ಹಾಗೂ ಸಾರ್ವಜನಿಕರ ಸಹಕಾರ ಅತಿ ಅವಶ್ಯಕ ಎಂದು ಮಾಜಿ ಸಂಸದ ರಮೇಶ್ ಕತ್ತಿ ಹೇಳಿದರು.


ಹುಕ್ಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಸುಧಾರಣೆಗಾಗಿ ವಿವಿಧ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.


ಗ್ರಾಮದ ಮುಖಂಡರು ಮುಂದೆ ನಿಂತು ಉತ್ತಮ ಗುಣಮಟ್ಟದ ಕೆಲಸಗಳನ್ನು ನಿರ್ಮಿಸಿಕೊಳ್ಳಬೇಕು. ಬೇಸಿಗೆಯಲ್ಲಿ ಜನತೆಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಸಕಾಲಕ್ಕೆ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಹಕಾರದೊಂದಿಗೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.


ತಾಲ್ಲೂಕಿನ 56 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ 194 ಕೋಟಿ 13 ಲಕ್ಷ ರೂ ವೆಚ್ಚದ ಬಹು ಗ್ರಾಮ ಶುದ್ಧ ಕುಡಿಯುವ ನೀರು ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.


ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 20 ಜನ ವಿಕಲಚೇತನರಿಗೆ ಮಂಜೂರಾದ ಉಚಿತ ಯಂತ್ರಚಾಲಿತ ದ್ವಿಚಕ್ರ ವಾಹನ ವಾಹನಗಳನ್ನು ವಿತರಿಸಲಾಯಿತು.


ಇದಕ್ಕೂ ಮೊದಲು ಹರಗಾಪುರ, ಕಣಗಲಾ, ಶಿಪ್ಪೂರ, ಕೆ ಎಂ ಆಲೂರ, ಕರಜಗಾ, ಗೌಡವಾಡ, ಬಡಕುಂದ್ರಿ, ಗೌಡವಾಡ, ಹುಲ್ಲೋಳಿ ಹಟ್ಟಿ, ರಾಜನಕೋಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಡಾಂಬರಿಕರಣ, ಚರಂಡಿ, ಸಿಸಿ ರಸ್ತೆ ಸೇತುವೆ, ಹಾಗೂ ನಿಡಸೋಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೋನಿಗಳಲ್ಲಿ ಕುಡಿಯುವ ನೀರು ಸುಧಾರಣೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೆರಿಸಲಾಯಿತು.


ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಮುಖಂಡರಾದ ಸತ್ಯಪ್ಪ ನಾಯಿಕ, ರಾಚಯ್ಯಾ ಹಿರೇಮಠ, ಶೀತಲ ಬ್ಯಾಳಿ, ಗುರು ಕುಲಕರ್ಣಿ, ಅಶೋಕ ಹಿರೇಕೂಡಿ, ವಿರೇಶ ಗಜಬರ, ಗುತ್ತಿಗೆದಾರರ ಮಲ್ಲಪ್ಪ ಬಿಸಿರೊಟ್ಟಿ, ಪರಪ್ಪ ಮಗದುಮ್ಮ, ತಿಮನ್ನ ಗಾಡಿವಡ್ಡರ, ಮತ್ತಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ