LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

“ರಾಮೇಶ್ವರಂ ಕೆಫೆ ಬಾಂಬ್ ​ಪ್ರಕರಣ ಹೇಳಿಕೆ ಸಂಬಂಧ ” ಶೋಭಾಗೆ ಹೈಕೋರ್ಟ್​ ಪ್ರಶ್ನೆ

ಚೆನ್ನೈ/ಬೆಂಗಳೂರು ಜುಲೈ 10: “ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ​ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂದು ಮದ್ರಾಸ್​​ ಹೈಕೋರ್ಟ್ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು ಸಚಿವೆ​ ಶೋಭಾ ಕರಂದ್ಲಾಜೆ   ಅವರಿಗೆ ಪ್ರಶ್ನಿಸಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್​ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ್ದ ಸಚಿವೆ ಶೋಭಾ ಕರಂದ್ಲಾಜೆ, “ತಮೀಳುನಾಡಿನಲ್ಲಿ ತರಬೇತಿ ಪಡೆಯುತ್ತಾರೆ, ಇಲ್ಲಿ (ಕರ್ನಾಟಕ)ಕ್ಕೆ ಬಂದು ಬಾಂಬ್​ ಇಡುತ್ತಾರೆ” ಎಂದು ಆರೋಪ ಮಾಡಿದ್ದರು.

ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಸಿ.ತ್ಯಾಗರಾಜನ್ ಎಂಬುವರು ಮಾರ್ಚ್ 20 ರಂದು ಮಧುರೈನ ಸೈಬರ್ ಕ್ರೈಂ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಅವರು ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಜಯಚಂದ್ರನ್ ಈ ಪ್ರಶ್ನೆಯನ್ನು ಕೇಳಿದರು.

ಬಾಂಬರ್‌ಗಳಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ತಮಿಳರ ವಿರುದ್ಧ ಎತ್ತಿಕಟ್ಟಿದ್ದಾರೆ ಎಂಬ ಆರೋಪವನ್ನು ಶೋಭಾ ಕರಂದ್ಲಾಜೆ ತಳ್ಳಿಹಾಕಿದ್ದಾರೆ. ತಮಿಳುನಾಡಿನ ಆಂತರಿಕ ಭದ್ರತೆಯ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸುವುದು ನನ್ನ ಉದ್ದೇಶವಾಗಿತ್ತು ಹೊರತು ಬೇರೆ ಯಾವ ಉದ್ದೇಶವಿರಲಿಲ್ಲ ಎಂದು ನ್ಯಾಯ ಪೀಠದ ಮುಂದೆ ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್