LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿ ಕರೆತಂದು ಕೃತ್ಯದ ಮರುಸೃಷ್ಟಿ






ಬೆಂಗಳೂರು: ಬಾಂಬ್​ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್'ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.


ಪ್ರಮುಖ ಆರೋಪಿಯಾಗಿರುವ ಮುಸಾವಿರ್ ಹುಸೇನ್ ಶಾಜಿಬ್, ಘಟನೆಯ ದಿನ ಕ್ಯಾಪ್ ಧರಿಸಿ ಕೆಫೆಗೆ ಹೇಗೆ ಬಂದ? ಎಷ್ಟು ನಿಮಿಷಗಳ ಕಾಲ ಕೆಫೆಯಲ್ಲಿ ಕುಳಿತಿದ್ದ? ಕುಳಿತಿದ್ದಷ್ಟು ಕಾಲ ಏನೇನು ಆರ್ಡರ್ ಮಾಡಿದ್ದ? ನಂತರ ಸ್ಫೋಟಕಗಳಿದ್ದ ಬ್ಯಾಗ್ ಹೇಗೆ ಇರಿಸಿ ವಾಪಸ್ ತೆರಳಿದ ಎಂಬ ಘಟನಾವಳಿಗಳನ್ನ ಆತನಿಂದಲೇ ಮರುಸೃಷ್ಟಿಸಿ ಮಹಜರು ಮಾಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಫೆ ಸುತ್ತಮುತ್ತ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.


ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್​ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್​​ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನು ಏಪ್ರಿಲ್ 12 ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್