Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ರಾಮೇಶ್ವರಂ ಕೆಫೆ ಸ್ಫೋಟ" ಬೆಂಗಳೂರಿನ 5 ಕಡೆ ಎನ್ಐಎ ರೇಡ್!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಬುಧವಾರ ನಗರದ ಐದು ಕಡೆ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ಮಂಗಳವಾರ ತಿಳಿದುಬಂದಿತ್ತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಎನ್ಐಎ ತಂಡದಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿದ್ದಾರೆ.

ಚೆನ್ನೈನ ಮೂರು ಕಡೆ ಕೂಡ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ.

ತಮಿಳುನಾಡಿನಲ್ಲಿ ನಡೆದಿರುವ ಎನ್‌ಐಎ ದಾಳಿ ಕೂಡ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಕೆಲವರನ್ನು ಬಂಧಿಸಲಾಗಿತ್ತು. ಬಂಧಿತರಿಂದ ಹಲವು ಮಹತ್ವದ ಸುಳಿವುಗಳು ಎನ್ಐಎ ಅಧಿಕಾರಿಗಳಿಗೆ ಲಭಿಸಿದ್ದವು. ಶಿವಮೊಗ್ಗ ಮೂಲದ ಇಬ್ಬರು ಕೆಲ ದಿನ ಚೆನ್ನೈನಲ್ಲಿ ತಂಗಿದ್ದರು ಎನ್ನಲಾಗಿತ್ತು. ಹೀಗಾಗಿ ಈ ಎನ್ಐಎ ದಾಳಿ ನಡೆದಿದೆ. ಅದೇ ರೀತಿ ಬಾಂಬ್ ಇಟ್ಟಿದ್ದ ವ್ಯಕ್ತಿ ಧರಿಸಿದ್ದ ಟೋಪಿಯನ್ನು ಸಹ ಚೆನ್ನೈ ಸೆಂಟ್ರಲ್ನಿಂದ ಖರೀದಿಸಿರುವುದು ತನಿಖೆ ವೇಳೆ ತಿಳಿದುಬಂದಿತ್ತು.

ಬಾಂಬ್ ಇಟ್ಟಿದ್ದ ಉಗ್ರ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಪರಾರಿಯಾಗಿದ್ದಾನೆ ಎಂಬ ಶಂಕೆಯೂ ನಂತರದಲ್ಲಿ ವ್ಯಕ್ತವಾಗಿತ್ತು. ಸ್ಫೋಟಕ್ಕೂ ಮುನ್ನ ಆರೋಪಿ ಎರಡು ತಿಂಗಳು ತಮಿಳುನಾಡಿನಲ್ಲಿದ್ದ. ಉಗ್ರ ಧರಿಸಿದ್ದ 10 ನಂಬರ್ನ ಟೋಪಿಯ ಬ್ರ್ಯಾಂಡ್ನನ ಜಾಡು ಹಿಡಿದ ಎನ್ಐಎ ಅಧಿಕಾರಿಗಳಿಗೆ ಅದು ಚೆನ್ನೈಯಿಂದ ಖರೀದಿಸಿದ್ದೆಂಬುದು ತಿಳಿದುಬಂದಿತ್ತು.

ಮಾರ್ಚ್ 01 ರಂದು ಬೆಂಗಳೂರಿನ ವೈಟ್ಫಿಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಐದು ಮಂದಿ ಗಾಯಗೊಂಡಿದ್ದರು. ಆರಂಭದಲ್ಲಿ ಪ್ರಕರಣದ ತನಿಖೆಯ ಹೊಣೆಯನ್ನು ಸಿಸಿಬಿ ಪೊಲೀಸರು ವಹಿಸಿಕೊಂಡಿದ್ದರು. ನಂತರ ಪ್ರಕರಣದ ಗಂಭೀರತೆ ಅರಿತು ಸರ್ಕಾರ ತನಿಖೆಯನ್ನು ಎನ್ಐಎಗೆ ವರ್ಗಾಯಿಸಿತ್ತು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*