Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮೇಶ್ವರಂ ಕೆಫ್ ಬಾಂಬ್ ಬ್ಲಾಸ್ಟ್ ಪ್ರಕರಣ : ಓರ್ವ ಪ್ರಮುಖ ಸಂಚುಕೋರನ ಬಂಧನ

ಬೆಂಗಳೂರು, ಮಾ., ೨೮ :- ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಓರ್ವ ಪ್ರಮುಖ ಸಂಚುಕೋರನನ್ನು ಬಂಧಿಸುವಲ್ಲಿ ಎನ್‌ಐಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಎನ್‌ಐಎ ಟ್ವೀಟ್ ಮಾಡಿ, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ. ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಹಾಗೂ ಮುಸ್ಸಾವಿರ್ ಶಜೀಬ್‌ನ ಸಹ ಸಂಚುಕೋರ ಮುಜಾಮುಲ್ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ ೨೮) ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಮತ್ತು ಆತನ ಸಹಚರ ಅಬ್ದುಲ್ ಮಥೀನ್ ತಾಹಾ ಇನ್ನೂ ಪತ್ತೆ ಆಗಬೇಕಿದೆ.

https://twitter.com/ANI/status/1773350277308944882?ref_src=twsrc%5Etfw%7Ctwcamp%5Etweetembed%7Ctwterm%5E1773350277308944882%7Ctwgr%5E05193ab9f46e71e9f72214be69d59bdb0b7b280c%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbengaluru-rameshwaram-cafe-blast-case-nia-arrests-key-conspirator-mujamull-sharif-rbj-807718.html

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಎನ್‌ಐಎ ತನ್ನ ತನಿಕೆಯಲ್ಲಿ ಮಹತ್ವದ ಹಂತ ಮುಟ್ಟಿದೆ. ಕರ್ನಾಟಕದ ೧೨, ತಮಿಳುನಾಡಿನ ೫ ಮತ್ತು ಉತ್ತರ ಪ್ರದೇಶದ ೧ ಸೇರಿದಂತೆ ಒಟ್ಟು ೧೮ ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಬುಧವಾರ ಮುಜಾಮಿಲ್ ಶರೀಫ್‌ನನ್ನು ಬಂಧಿಸಲಾಗಿದೆ ಎಂದು ಎನ್‌ಐ ಟ್ವೀಟ್‌ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

https://twitter.com/NIA_India/status/1773349764198711659?ref_src=twsrc%5Etfw%7Ctwcamp%5Etweetembed%7Ctwterm%5E1773349764198711659%7Ctwgr%5Ebd9aa930e225da9b4c08704e1ea5e1b765bfbaf9%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FNIA_India%2Fstatus%2F1773349764198711659%3Fref_src%3Dtwsrc5Etfw

ಎನ್‌ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಪ್ರಮುಖ ಸಂಚುಕೋರ ಆಗಿದ್ದ ಆರೋಪಿ ಮುಜಾಮಿಲ್ ಶರೀಫ್‌ನನ್ನು ಬಂಧಿಸಿದ್ದಾರೆ. ಮುಜಾಮಿಲ್ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಪ್ರಕರಣದ ಪ್ರಮುಖ ಆರೋಪಿಯಾದ ಮುಸಾವೀರ್ ಹುಸೇನ್‌ಗೆ ತುಂಬಾ ಆಪ್ತನಾಗಿದ್ದ. ಇದಕ್ಕೆ ಸಹಾಯ ಮಾಡಿದ್ದ ಇನ್ನೊಬ್ಬನನ್ನು ಅಬ್ದುಲ್ ಮಥೀನ್ ತಾಹಾ ಎಂದು ಗುರುತಿಸಲಾಗಿದೆ. ಇನ್ನೂ ತಲೆಮರೆಸಿಕೊಂಡಿರುವ ಈ ಇಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.

ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್‌ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ