ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡ ಬಳಿಕ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಅಳಲು ತೋಡಿಕೊಳ್ಳಲು ಶ್ರೀರಾಮುಲು ಮುಂದಾಗಿದ್ದರು. ಒಂದು ಬಾರಿ ಅವರನ್ನು ದೆಹಲಿಗೆ ಬರುವಂತೆ ಹೇಳಿದ್ದ ಹೈಕಮಾಂಡ್ ನಾಯಕರು, ನಂತರ ಸದ್ಯಕ್ಕೆ ಬರುವುದು ಬೇಡ ಎಂಬ ಸಂದೇಶ ಕಳುಹಿಸಿದ್ದರು. ಇದರಿಂದಾಗಿ ಹೈಕಮಾಂಡ್ ಮುಂದೆ ಅಸಮಾಧಾನ ಹೇಳಿಕೊಳ್ಳುವ ರಾಮುಲು ಪ್ರಯತ್ನಕ್ಕೆ ತಡೆಯಾಗಿತ್ತು.
ಇದೀಗ ಅಮಿತ್ ಶಾ ಬೆಂಗಳೂರಿಗೆ ಬರುವುದನ್ನೇ ರಾಮಲು ಎದುರು ನೋಡುತ್ತಿದ್ದರು. ಶಾ ಅವರೊಂದಿಗಿನ ತಮ್ಮ ಹಳೆಯ ಸ್ನೇಹವನ್ನು ಬಳಸಿಕೊಂಡು, ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಉತ್ಸಾಹದಿಂದ ಇದ್ದರು. ಆದರೆ ರಾಮುಲುಗೆ ಜನಾರ್ದನ ರೆಡ್ಡಿ ಟಕ್ಕರ್ ಕೊಟ್ಟಿದ್ದಾರೆ.