LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ

ವಾರಾಣಸಿ, ಏಪ್ರಿಲ್ 7: ಮಾರ್ಚ್ 29 ಮತ್ತು ಏಪ್ರಿಲ್ 4ರ ನಡುವೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರು 23 ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರಲ್ಲಿ 11 ಮಂದಿಯನ್ನು ಇನ್ನೂ ಪತ್ತೆಹಚ್ಚಿಲ್ಲ. ಇಲ್ಲಿಯವರೆಗೆ 6 ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 29ರಂದು ಸ್ನೇಹಿತನೊಬ್ಬ ವಾರಾಣಸಿಯ ಪಿಶಾಚ್‌ಮೋಚನ್ ಪ್ರದೇಶದಲ್ಲಿ ಹುಕ್ಕಾ ಬಾರ್‌ಗೆ ಮಹಿಳೆಯನ್ನು ಕರೆದೊಯ್ದಿದ್ದ. ನಂತರ ಆಕೆ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆ ಕ್ರೀಡಾ ಕೋರ್ಸ್‌ಗೆ ಪ್ರವೇಶಕ್ಕಾಗಿ ತಯಾರಿ ನಡೆಸುತ್ತಿದ್ದಳು ಮತ್ತು ನಿಯಮಿತವಾಗಿ ಕಾಲೇಜಿಗೆ ಓಟದ ಅಭ್ಯಾಸಕ್ಕಾಗಿ ಹೋಗುತ್ತಿದ್ದಳು.





“ಆ ಬಾಲಕಿಯ ಹೇಳಿಕೆಯ ಪ್ರಕಾರ, ಮಾರ್ಚ್ 29ರಂದು ಸ್ನೇಹಿತನೊಬ್ಬ ಪಿಶಾಚ್‌ಮೋಚನ್ ಪ್ರದೇಶದ ಹುಕ್ಕಾ ಬಾರ್‌ಗೆ ಅವಳನ್ನು ಕರೆದುಕೊಂಡು ಹೋಗಿದ್ದ. ಅಲ್ಲಿ ಇತರ ಪುರುಷರು ಸಹ ಬಂದಿದ್ದರು. ಆ ಹುಡುಗಿ ಕುಡಿಯುವ ಕೋಲ್ಡ್ ಡ್ರಿಂಕ್‌ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಯಿತು. ಅಲ್ಲಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆರೋಪಿಗಳಲ್ಲಿ ಕೆಲವರು ಅವಳಿಗೆ ಪರಿಚಿತರು, ಇನ್‌ಸ್ಟಾಗ್ರಾಮ್‌ನ ಪರಿಚಯಸ್ಥರು ಮತ್ತು ಮಾಜಿ ಸಹಪಾಠಿಗಳು. ಆ ಹುಡುಗಿಯ ಕುಟುಂಬದವರ ದೂರಿನ ನಂತರ, ಪೊಲೀಸರು ಅವಳನ್ನು ಪತ್ತೆಹಚ್ಚಿದರು. ಬಳಿಕ ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ಸಹ ವಿಚಾರಣೆ ಮಾಡಲು ಪ್ರಾರಂಭಿಸಿದರು. ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್