Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿನಿಮಾ ಆಗುತ್ತಿದೆ ರವಿ ಬೆಳಗೆರೆ ಸಣ್ಣಕಥೆ ವೇಶಗಳು ಜೋಗತಿಯಾಗಿ! ಅಳಿಯ ಶ್ರೀನಗರ ಕಿಟ್ಟಿ  

      ಖ್ಯಾತ ಪತ್ರಕರ್ತ ದಿ. ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ  'ವೇಶಗಳು' ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ.


     ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.

     ಈ ಚಿತ್ರದಲ್ಲಿ ಕೆಲಸ ಮಾಡುವವರೆಲ್ಲರೂ ರಂಗಪ್ರತಿಭೆಗಳೇ ಆಗಿದ್ದರಿಂದ, ರಾಜ್ ಗುರು ಸಂಗಡಿಗರಿಂದ ರಂಗಗೀತೆಗಳ ಗಾಯ‌ದ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

       ಜು.೮ರಂದು ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬದ ದಿನ‌ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ 'ವೇಶಗಳು' ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಬರ್ತ್ ಡೇ  ಸಮಾರಂಭ ಏರ್ಪಡಿಸಲಾಗಿತ್ತು.


ವೇದಿಕೆಯಲ್ಲಿ ನಿರ್ದೇಶಕ ಕಿಶನ್ ರಾವ್ ಅವರು ಈ  ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಲು ಬೆಳಗೆರೆ ಅವರ ಮಗಳು ಭಾವನಾ ಒಪ್ಪಿಗೆ ಹಾಗೂ ಅಳಿಯ ಕಿಟ್ಟಿ ಅವರಿಂದ ಜೋಗತಿ ಪಾತ್ರಕ್ಕೆ ಒಪ್ಪಿಸಲು ಪಟ್ಟಂಥ ಹರಸಾಹಸಗಳನ್ನು ತೆರೆಯ ಮೇಲೆ ಪ್ರದರ್ಶಿಸಲಾಯಿತು.

     ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ  ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್ ಗಳಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ದತೆ ಮಾಡಿಕೊಂಡಿದ್ದಾರೆ.‌ ಚಿತ್ರದಲ್ಲಿ  ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ.

     "ಮುಂದಿನ ತಿಂಗಳಿಂದ ಚಿತ್ರೀಕರಣ ಆರಂಭಿಸುತ್ತಿದ್ದು, ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ವ  ಚಿತ್ರೀಕರಣ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು" ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು.

ಕೌಶಿಕ್ ಹರ್ಷ ಸಂಗೀತ, ರಾಜ್ ಗುರು ದತ್ತರಾಜ್ ಸಂಭಾಷಣೆ, ಅಕ್ಷಯ್ ಪಿ.ರಾವ್ ಸಂಕಲನ ಚಿತ್ರಕ್ಕಿದೆ.

    ಈ ಕಾರ್ಯಕ್ರಮದಲ್ಲಿ  ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು, ಪ್ರವೀಣ್ ಕುಮಾರ್, ಶಿಲ್ಪ ಶ್ರೀನಿವಾಸ್‌, ಕುಶಾಲ್ ಹಾಗೂ  ಮುಂತಾದವರು ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ