Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಣ್ಣ ಪ್ರತಿಮೆ ಹಾನಿ ಖಂಡಿಸಿ ಕಿತ್ತೂರಿನಲ್ಲಿ ರಾಯಣ್ಣ ಯುವ ಸಂಘಟನೆ ಪ್ರತಿಭಟನೆ

ಚನ್ನಮ್ಮನ ಕಿತ್ತೂರು,08: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಿಕನಹಳ್ಳಿ ಗ್ರಾಮದಲ್ಲಿ ಕ್ರಾಂತಿ ವೀರ ಶೂರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಹಾನಿಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಿತ್ತೂರು ಕ್ರಾಂತಿ ವೀರ ಶೂರ ಸಂಗೊಳ್ಳಿ ರಾಯಣ್ಣ  ಯುವ ಸಂಘಟನೆ ರಾಜ್ಯಾಧ್ಯಕ್ಷ ಮಹಾಂತೇಶ ಕರಬಸನ್ನವರ ಆಗ್ರಹ

ಘಟನೆ ವಿವರ: : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬಿಕನಹಳ್ಳಿ ಗ್ರಾಮದಲ್ಲಿ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮಂಗಳವಾರ ತಡರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಕೈ, ಕೈಯಲ್ಲಿರುವ ಖಡ್ಗ ಹಾಗೂ ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಹಾನಿಗೊಳಿಸಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವ ಘಟನೆ ಜರುಗಿದೆ.

ಘಟನೆಯ ಕುರಿತು ಕ್ರಾಂತಿ ವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ರಾಜ್ಯಾಧ್ಯಕ್ಷ ಮಹಾಂತೇಶ ಕರಬಸನ್ನವರ ಮಾತನಾಡಿ ಸಂಗೊಳ್ಳಿ ರಾಯಣ್ಣ ಸರ್ವ ಸಮುದಾಯದ ನಾಯಕ ಮತ್ತು ಸ್ವತಂತ್ರಕ್ಕಾಗಿ ಕಿತ್ತೂರು ರಾಣಿ ಚನ್ನಮ್ಮನ ಜೊತೆಗೆ ಹೋರಾಡಿದ ದೇಶಭಕ್ತ ಸಂಗೊಳ್ಳಿ ರಾಯಣ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ದೂರ ದೃಷ್ಟಿಯಿಂದ ಅವರ ಪ್ರತಿಮೆಯನ್ನು ರಾಜ್ಯದಾದ್ಯಂತ ಎಲ್ಲ ಸಮುದಾಯಗಳ ಸಹಕಾರದಿಂದ ಯುವಕರು ಒಂದು ವರ್ಷದ ಹಿಂದೆ ಬಿಕನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡಿದ್ದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಯಾರೋ ಕಿಡಿಗೇರಿಗಳು ತಡರಾತ್ರಿ ಕೈ, ಕೈಯಲ್ಲಿರುವ ಖಡ್ಗ ಹಾಗೂ ಕಾಲುಗಳ ಭಾಗಕ್ಕೆ ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ. ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನ ಸರ್ಕಾರ ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಪ್ರತಿಮೆ ಮುಂದೆ ನಮ್ಮ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ರಾಜ್ಯದ ಎಲ್ಲ ರಾಯಣ್ಣನ ಅಭಿಮಾನಿಗಳು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿ. ದುಷ್ಕರ್ಮಿಗಳನ್ನ ಕೂಡಲೆ ಬಂಧಿಸಬೇಕು ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ರಾಜ್ಯಾಧ್ಯಕ್ಷ ಮಹಾಂತೇಶ ಕರಬಸನ್ನವರ, ದಯಾನಂದ ವರಗನ್ನವರ, ರಮೇಶ ವರಗನ್ನವರ, ರುದ್ರಪ್ಪ ವರಗನ್ನವರ, ಬಸವರಾಜ ಅಂಗಡಿ, ಮಡಿವಾಳಪ್ಪ ವರಗನ್ನವರ, ಅಭಿಷೇಕ ವರಗನ್ನವರ, ಪ್ರಕಾಶ ದರೆನ್ನವರ, ಎಲ್ಲಪ್ಪ ವರಗನ್ನವರ, ಅಶೋಕ ವರಗನ್ನವರ, ಮಡಿವಾಳೆಪ್ಪ ದರೆನ್ನವರ ಸೇರಿದಂತೆ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ