Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡದಿರಲು ಆರ್​ಬಿಐ ನಿರ್ಧಾರ

ಮುಂಬೈ: ಭಾರತೀಯ ರಿಸರ್ವ್​ ಬ್ಯಾಂಕ್​ ಸತತ 9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇರುವಂತೆ ಶೇಕಡಾ 6.5ರಲ್ಲೇ ಮುಂದುವರಿಸಿದೆ. ತನ್ನ ಆರ್ಥಿಕ ನೀತಿಗಳ ಸಭೆ ಬಳಿಕ ಇಂದು ಸುದ್ದಿಗೋಷ್ಠಿ ನಡೆಸಿದ ಆರ್​ಬಿಐ ಗವರ್ನರ್​​ ಶಕ್ತಿಕಾಂತ್​ ದಾಸ್​, ಬಡ್ಡಿದರವನ್ನು ಯಥಾಸ್ಥಿತಿಯಲ್ಲೇ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ಆರ್​ಬಿಐ ತನ್ನ ಎಚ್ಚರಿಕೆ ಹೆಜ್ಜೆಯನ್ನು ಮುಂದುವರೆಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ತೀರ್ಮಾನಿಸಿದೆ. ವಿಕಸಿಸುತ್ತಿರುವ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಒಟ್ಟಾರೆ ಆರ್ಥಿಕ ದೃಷ್ಟಿಕೋನದ ವಿವರವಾದ ಮೌಲ್ಯಮಾಪನದ ನಂತರ, ನಾಲ್ವರು ಸದಸ್ಯರು ರೆಪೋ ದರವನ್ನು ಶೇಕಡಾ 6.5ರ ಮಟ್ಟದಲ್ಲೇ ಇರಿಸಲು ನಿರ್ಧರಿಸಿದ್ದರಿಂದಾಗಿ ಆರ್​ಬಿಐ ಈ ನಿಲುವಿಗೆ ಬಂದಿದೆ.


"ಸ್ಥಾಯಿ ಠೇವಣಿ ಸೌಲಭ್ಯದ ದರವು ಶೇ 6.25, ಮಾರ್ಜಿನಲ್ ಸ್ಟ್ಯಾಂಡಿಂಗ್ ಸೌಲಭ್ಯ ದರ ಹಾಗೂ ಬ್ಯಾಂಕ್ ದರವನ್ನು ಶೇ 6.75ರಲ್ಲೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ದಾಸ್​ ಇದೇ ವೇಳೆ ಪ್ರಕಟಿಸಿದರು. ಹಣದುಬ್ಬರವನ್ನು ನಿಯಂತ್ರಣದಲ್ಲಿ ಇಡುವ ದೃಷ್ಟಿಕೋನದಿಂದ ರೆಪೋ ದರವನ್ನು ಸ್ಥಿರವಾಗಿಡುವ ನಿರ್ಧಾರಕ್ಕೆ ಬರಲಾಗಿದೆ. ಆಹಾರ ಹಣದುಬ್ಬರ ಮತ್ತು ಇತರ ಆರ್ಥಿಕ ಅಂಶಗಳಿಂದಾಗಿ ಹಣದುಬ್ಬರವನ್ನು ಶೇಕಡಾ 4ರೊಳಗೆ ತರುವ ಗುರಿಯ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ ತನ್ನ ಗುರಿ ತಲುಪಲು ಕೇಂದ್ರೀಯ ಬ್ಯಾಂಕ್‌ ಸವಾಲುಗಳನ್ನು ಎದುರಿಸುತ್ತಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ