Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ಮರು ಸಮೀಕ್ಷೆ: 165 ಕೋಟಿ ನೀರಲ್ಲಿ ಹೋಮ; ಸಿದ್ದರಾಮಯ್ಯ ವಿರುದ್ಧ ಅಶೋಕ ಕಿಡಿ

ಬೆಂಗಳೂರು: ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ನೀವು ಏನಿದ್ದರೂ ಹೈಕಮಾಂಡ್‌ ವಾಕ್ಯ ಪರಿಪಾಲಕ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ , ಜಾತಿಗಣತಿ ಮರು ಸಮೀಕ್ಷೆ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡಿಗರ ಪ್ರಶ್ನೆಗಳು ಎಂದು ಬರೆದುಕೊಂಡಿರುವ ಅಶೋಕ್, ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ, ಆದರೆ ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ. ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ?

ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತುಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ? ಎಂದು ಪ್ರಶ್ನಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ