Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ಮರು ಸಮೀಕ್ಷೆ: 165 ಕೋಟಿ ನೀರಲ್ಲಿ ಹೋಮ; ಸಿದ್ದರಾಮಯ್ಯ ವಿರುದ್ಧ ಅಶೋಕ ಕಿಡಿ

ಬೆಂಗಳೂರು: ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ. ಇದರಿಂದ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮಗೆ ರಾಜ್ಯದ ಜನರ ಮೇಲೆ, ಮಠಾಧೀಶರು, ಸಮುದಾಯಗಳ ಮುಖಂಡರ ಮೇಲೆ ವಿಶ್ವಾಸವಿಲ್ಲ. ನೀವು ಏನಿದ್ದರೂ ಹೈಕಮಾಂಡ್‌ ವಾಕ್ಯ ಪರಿಪಾಲಕ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ , ಜಾತಿಗಣತಿ ಮರು ಸಮೀಕ್ಷೆ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡಿಗರ ಪ್ರಶ್ನೆಗಳು ಎಂದು ಬರೆದುಕೊಂಡಿರುವ ಅಶೋಕ್, ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ, ಆದರೆ ನಿಮಗೆ ಹೈಕಮಾಂಡ್ ತಪರಾಕಿ ಹಾಕಿದಾಕ್ಷಣ, ಮರು ಸಮೀಕ್ಷೆ ಮಾಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದ್ದೀರಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು 90 ದಿನಗಳ ಕಾಲಮಿತಿಯಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಸಮೀಕ್ಷೆ ಹೇಗೆ ಸಾಧ್ಯ ಎಂಬುದು ಜನಸಾಮಾನ್ಯರ ಆತಂಕವಾಗಿದೆ. ಶಾಲೆಗಳು ಈಗಾಗಲೇ ಆರಂಭವಾಗಿವೆ. ಇಂತಹ ಸಮಯದಲ್ಲಿ ಸಮೀಕ್ಷೆಯಂತಹ ಬೃಹತ್ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿದರೆ, ಶೈಕ್ಷಣಿಕ ಚಟುವಟಿಕೆಗಳು ಸಂಪೂರ್ಣವಾಗಿ ಬುಡಮೇಲಾಗುತ್ತವೆ. ಮಕ್ಕಳ ಭವಿಷ್ಯದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಹಾಗಾದರೆ, ಈ 90 ದಿನಗಳಲ್ಲಿ ಸಮೀಕ್ಷೆಯನ್ನು ನಡೆಸಲು ಸರ್ಕಾರ ಯಾರನ್ನು ನಿಯೋಜಿಸಲಿದೆ?

ಆನ್‌ಲೈನ್ ಮೂಲಕ ಸಮೀಕ್ಷೆ ನಡೆಸುವ ಚಿಂತನೆ ಮತ್ತೊಂದು ಅವಿವೇಕದ ಕ್ರಮವೆಂದು ತೋರುತ್ತಿದೆ. ಅನೇಕ ಅಕ್ಷರಸ್ಥರೇ ಇಂದಿಗೂ ಆನ್‌ಲೈನ್ ವ್ಯವಸ್ಥೆಯಿಂದ ದೂರ ಇರುವಾಗ, ಇಂತಹ ಸಮೀಕ್ಷೆ ಹೇಗೆ ಸಾಧ್ಯ? ಇದರಿಂದ ಮಾಹಿತಿಯ ನಿಖರತೆ ಮತ್ತು ಗುರುತುಪತ್ತೆ ಹೇಗೆ ಸಾಧ್ಯವಾಗುತ್ತದೆ? ತಪ್ಪು ದಾಖಲಾತಿಗಳನ್ನು ತಡೆಯಲು ಸರ್ಕಾರ ಏನು ಕ್ರಮ ತೆಗೆದುಕೊಳ್ಳಲಿದೆ? ಎಂದು ಪ್ರಶ್ನಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ