Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓದುಗರ ಚಾವಡಿ ರಾಜೇಂದ್ರಕುಮಾರ ಬಿರಾದಾರ ಸಾಂಕೃತಿಕ ವೇದಿಕೆಯ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮ

ವಿಜಯಪುರ29: ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳು, ಮನೆಗಳಲ್ಲಿ ನಡೆಯುವ ಸಣ್ಣ ಪುಟ್ಟ ಸಂಭ್ರಮಗಳು, ಗಂಟಲುಬ್ಬಿ ಬಂದ ನೋವಿನ ಬಿಕ್ಕಳಿಕೆಗಳು, ನಮ್ಮವೇ ಆದ ಸಮಸ್ಯೆಗಳು, ಆಶಯಗಳು, ಹತಾಶೆಗಳು ಕಥಾವಸ್ತುಗಳಾಗಿ ಗಮನ ಸೆಳೆಯುತ್ತವೆ ಎಂದು ಸಾಹಿತಿ ದಾಕ್ಷಾಯಿಣಿ
ಬಿರಾದಾರ ಹೇಳಿದರು. ಬ್ಯಾಂಕರ್ಸ್ ಕಾಲೋನಿಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಡಾ. ಎಂ. ಎಸ್. ಮಾಗಣಗೇರಿ ಕುಟುಂಬದವರು
ಆಯೋಜಿಸಿದ ಓದುಗರ ಚಾವಡಿ ರಾಜೇಂದ್ರಕುಮಾರ ಬಿರಾದಾರ ಸಾಂಕೃತಿಕ ವೇದಿಕೆಯ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ತಾಳಿಕೋಟಿಯ ಸವಿತಾ ಆರ್. ಇನಾಮದಾರ ಅವರ ಅರ್ಧ ನೆನಪು ಅರ್ಧ ಕನಸು ಕಥಾ ಸಂಕಲನವನ್ನು ಪರಿಚಯಿಸಿ ಅವರು ಮಾತನಾಡಿದರು. ಇಲ್ಲಿನ ಕಥೆಗಳ ಭಾಷೆ ವಿಶೇಷವಾಗಿದೆ ಉತ್ತರ ಕರ್ನಾಟಕದ ಭಾಷೆಯ ಲಯವನ್ನು ಸಮರ್ಥವಾಗಿ ಬಳಸುವುದರೊಟ್ಟಿಗೆ ಪ್ರಾದೇಶಿಕ ಅಸ್ಮಿತೆಯನ್ನು ಪ್ರತಿಷ್ಠಾಪಿಸಿ
ಸೂಕ್ಷ್ಮ ಭಾವನೆಗಳಿಗೆ ಈ ಭಾಗದ ಭಾಷೆ ಹಾಗೂ ಅದರ ನುಡಿಗಟ್ಟುಗಳು ಸಮರ್ಥವಾಗಿವೆ ಎಂಬುದನ್ನು ಸಾಕ್ಷಿಕರಿಸಿದ್ದಾರೆ.


ಮುಕ್ತವಾಗಿ ಒಲಿದಂತೆ ಉಲಿಯುವ ತನ್ನತನವಿರುವ ಈ ಭಾಷೆಯನ್ನು ಲೇಖಕರು ಕತೆಗಳಲ್ಲಿ ಅಚ್ಚುಕಟ್ಟಾಗಿ ದುಡಿಸಿಕೊಂಡಿದ್ದಾರೆ. ಇವರ ಬಹುತೇಕ ಕಥೆಗಳ ಪಾತ್ರಗಳಿಗೆ ಸಶಕ್ತ ಅಭಿವ್ಯಕ್ತಿ ಒದಗಿಬಂದಿದೆ. ಇಲ್ಲಿರುವ ಕತೆಗಳು ಯಾವುದೋ ಕಲ್ಪನೆಯ  ದಂತಗೋಪುರಗಳಲ್ಲಿ ಕುಳಿತು ಕಾಲಕ್ಷೇಪಕ್ಕಾಗಿ ಹೇಳಿಕೊಂಡ
ರಮ್ಯವಾದ ಸಂಗತಿಗಳಲ್ಲ. ಗ್ರಾಮ್ಯ ಪರಿಸರದಲ್ಲಿಯೇ ಒಡಮೂಡಿ ಆಕೃತಿ ತಾಳುವ ಈ ಕಥೆಗಳು ಹಳ್ಳಿಯ ಬದುಕಿನ ಬವಣೆ, ಛಲ, ಸೇಡು, ಅಸಹಾಯಕತೆ, ಧೈರ್ಯ ಎಲ್ಲವನ್ನೂ ತೆರೆದಿಡುತ್ತವೆ ಎಂದರು.


ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಅರ್ಜುಣಗಿಯ ಕನ್ನಡ ಉಪನ್ಯಾಸಕಿಯಾದ ಡಾ. ಸವಿತಾ ಝಳಕಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹೊಟೇಲ್ ಉದ್ಯಮಿ ಶ್ರೀ ನಾಗೇಶ್ ಶೆಟ್ಟಿ ಹಾಗೂ ಓಂ ಸಾಯಿ ಯೋಗ ಅಕಾಡೆಮಿಯ ಅಧ್ಯಕ್ಷೆ ಕೀರ್ತಿ ಮಠಪತಿ ಮಾತನಾಡಿ, ವ್ಯಾಯಾಮ, ಯೋಗ, ಧ್ಯಾನಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ದಿವ್ಯ ಔಷಧವಾದರೆ ಸಾಹಿತ್ಯ ಮತ್ತು ಓದು ಜ್ಞಾನದ ಹಸಿವನ್ನು ಹಿಂಗಿಸಿ ಸುಂದರ ವ್ಯಕ್ತಿತ್ವ
ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಸಾಹಿತಿ ಸುಭಾಷ್ ಯಾದವಾಡ ಮಾತನಾಡಿ ಕಥೆ ಕಟ್ಟುವುದೂ ಒಂದು ಕಲೆ, ಬದುಕಿನ ಅನುಭವಗಳ ಸುರಳಿಯನ್ನು ಬಿಚ್ಚಿ ಕಾಲ ಗರ್ಭದ ಸತ್ಯಾಸತ್ಯತೆಗಳ ಅನಾವರಣ ಮಾಡುವುದು ಕಥೆಗಳ ಮುಖ್ಯ ದ್ಯೇಹ ಎಂದರು. ವೇದಿಕೆ ಮೇಲೆ
ಚಾವಡಿ ಬಳಗದ ಅಧ್ಯಕ್ಷರಾದ ಬಿ. ಆರ್. ಬನ್ಸೋಡೆ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕಾವ್ಯ, ಜಾಣ, ರತ್ನ ಪರೀಕ್ಷೆಗಳ ಪಠ್ಯಪುಸ್ತಕಗಳ ರಚನಾ ಸಮಿತಿ ಗೆ ಉತ್ತರ ಕರ್ನಾಟಕ ಭಾಗದ ಸದಸ್ಯರಾಗಿ ಆಯ್ಕೆಗೊಂಡ ಡಾ. ಎಸ್. ಟಿ ಮೇರವಾಡೆಯವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಓದುಗರ ಚಾವಡಿಯ ಸಂಚಾಲಕರಾದ ಶರಣು ಸಬರದ, ಡಾ.ವಿ.ಡಿ ಐಹೊಳ್ಳಿ ಡಾ. ಉಷಾ ದೇವಿ ಹಿರೇಮಠ, ಪ್ರಭಾವತಿ ದೇಸಾಯಿ, ಪ್ರೊ.ಎಂ.ಎಸ್ ಝಳಕಿ, ರಮೇಶ ಚವಾಣ್, ಸಂಗಮೇಶ ಮೇತ್ರಿ, ಡಾ. ರಾಜಕುಮಾರ ಜೊಲ್ಲೆ, ಮನು ಪತ್ತಾರ ಕಲಕೇರಿ, ಶಿವಶರಣಪ್ಪ ಶಿರೂರು, ಜಿ. ಸಿ. ಹಿರೇಮಠ್, ರಮೇಶ್ ತೇಲಿ, ಶ್ರೀಧರ ಪತ್ತಾರ, ರವೀಂದ್ರ ಝಳಕಿ, ಅಮರೇಶ ಸಾಲಕ್ಕಿ, ಸುಭಾಷಚಂದ್ರ ಕನ್ನೂರ, ಶರಣಗೌಡ ಪಾಟೀಲ್ ಮಯೂರ ತಿಳಗೂಳಕರ್, ಡಾ. ಶಶಿಧರ ಶಿರಹಟ್ಟಿ, ಸೋಮಶೇಖರ ಕುರ್ಲೆ, ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕು. ಶ್ರೀನಿಧಿ ಮಾಗಣಗೇರಿ
ಪ್ರಾರ್ಥಿಸಿದರೆ ಬಳಗದ ಸದಸ್ಯರಾದ ಬಸವರಾಜ ಕುಂಬಾರ ನಿರೂಪಿಸಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ