Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ನಗರ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದು ಮರು ಸೇರ್ಪಡೆ



ಬಳ್ಳಾರಿ, ಜು.22.. ಬಹು ದಿನಗಳಿಂದ ಸಾರ್ವಜನಿಕರ ಬೇಡಿಕೆಯಾಗಿದ್ದ ಪೊಲೀಸ್ ಠಾಣೆಗಳ ಸರಹದ್ದು ಮರು ಗುರುತಿಸುವಿಕೆಯನ್ನು ಅಂತಿಮಗೊಳಿಸಿ ಸರ್ಕಾರ ಅಧಿಕೃತವಾಗಿ ಕರ್ನಾಟಕ ರಾಜ್ಯಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ.


ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹಲವು ಪ್ರದೇಶಗಳು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿದ್ದವು. ಗ್ರಾಮೀಣ ಠಾಣೆ, ಕೌಲಬಜಾರ್ ಠಾಣೆ ಹಾಗೂ ವಿವಿಧ ಠಾಣೆಗಳ ವ್ಯಾಪ್ತಿಗೆ ನಗರ ಕ್ಷೇತ್ರದ ಪ್ರದೇಶಗಳು ಸೇರಿದ್ದರಿಂದ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.


ಗ್ರಾಮೀಣ ಪೊಲೀಸ್ ವಿಭಾಗಕ್ಕೆ ಸಂಬಂಧಿಸಿ ದಿನನಿತ್ಯದ ಬದುಕಿನ ಇಲಾಖೆಯ ಕೆಲಸಗಳು, ವ್ಯಾಜ್ಯಗಳು, ದೂರುಗಳು ಇದ್ದಾಗ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಬೇಕೆಂದರೆ ಸಾರ್ವಜನಿಕರು ಬಳ್ಳಾರಿ ನಗರದಿಂದ ಸಿರುಗುಪ್ಪಾಕ್ಕೆ ಹೋಗಬೇಕಾದ ಸ್ಥಿತಿ ಇತ್ತು.


ಈ ಎಲ್ಲ ವಿಷಯಗಳನ್ನು ಮನಗಂಡ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ, ಅವೈಜ್ಞಾನಿಕವಾಗಿ ಇದ್ದ ಪೊಲೀಸ್ ಠಾಣೆಗಳ ಸರಹದ್ದುಗಳ ಮರು ಸೇರ್ಪಡೆ ಕಾರ್ಯವನ್ನು ಸಾಕಾರಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಟ್ಟಿದ್ದಾರೆ.

 ತಮ್ಮ ಮನವಿಗೆ ಸ್ಪಂದಿಸಿ, ಪೊಲೀಸ್ ಠಾಣೆಗಳ ಸರಹದ್ದು ಮರು ಸೇರ್ಪಡೆಗೊಳಿಸಲು ಪೊಲೀಸ್ ಇಲಾಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಶಾಸಕ ನಾರಾ ಭರತ್ ರೆಡ್ಡಿ ಸಾರ್ವಜನಿಕರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ