LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಿಡುಗಡೆಯಾದ ಖೇಲಾ ಚಿತ್ರದ  ನನ್ ಅಮ್ಮ ಹಾಡು 


     ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರದ 'ಖೇಲಾ' ಚಿತ್ರದ 'ನನ್ ಅಮ್ಮ' ಎಂಬ ಹಾಡು ಅಮ್ಮಂದಿರ ದಿನದಂದು  ಬಿಡುಗಡೆಯಾಗಿದೆ.

     ತಾಯಿ - ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ‌. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.


     ಹಿರಿಯ ನಿರ್ಮಾಪಕ ಹಾಗು ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ ಭರತ್ ವಿ.ಜೆ‌ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. "ಈವರೆಗೂ ಸಾಕಷ್ಟು ಲವ್ ಸ್ಟೋರಿಸ್ ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನ" ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಭರತ್.


     ಈ ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ ಶ್ರಾವಣಿ ಸುಬ್ರಹ್ಮಣ್ಯ ಹಾಗೂ ಮೈನಾ ಧಾರಾವಾಹಿಗಳಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಈ ಚಿತ್ರದ ಪ್ರಮುಖಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ.


      ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರುವ 'ಖೇಲಾ' ಚಿತ್ರಕ್ಕೆ ಎಂ.ಎಸ್ ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್ ಪ್ರಮೋದ್ ಜೋಯಿಸ್ ಬರೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್