Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡುಗಡೆಯಾದ ಖೇಲಾ ಚಿತ್ರದ  ನನ್ ಅಮ್ಮ ಹಾಡು 


     ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರದ 'ಖೇಲಾ' ಚಿತ್ರದ 'ನನ್ ಅಮ್ಮ' ಎಂಬ ಹಾಡು ಅಮ್ಮಂದಿರ ದಿನದಂದು  ಬಿಡುಗಡೆಯಾಗಿದೆ.

     ತಾಯಿ - ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ‌. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.


     ಹಿರಿಯ ನಿರ್ಮಾಪಕ ಹಾಗು ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ ಭರತ್ ವಿ.ಜೆ‌ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. "ಈವರೆಗೂ ಸಾಕಷ್ಟು ಲವ್ ಸ್ಟೋರಿಸ್ ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನ" ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಭರತ್.


     ಈ ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ ಶ್ರಾವಣಿ ಸುಬ್ರಹ್ಮಣ್ಯ ಹಾಗೂ ಮೈನಾ ಧಾರಾವಾಹಿಗಳಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಈ ಚಿತ್ರದ ಪ್ರಮುಖಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ.


      ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರುವ 'ಖೇಲಾ' ಚಿತ್ರಕ್ಕೆ ಎಂ.ಎಸ್ ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್ ಪ್ರಮೋದ್ ಜೋಯಿಸ್ ಬರೆದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ