ಶಿವಮೊಗ್ಗ, ಜನವರಿ 05: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ 7.50ಕ್ಕೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.