Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಟೋ ಮೀಟರ್ ದರ ಏರಿಕೆಗೆ ಚಾಲಕ ಸಂಘಟನೆಗಳಿಂದ ಮನವಿ

ಬೆಂಗಳೂರು,

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಆಟೋ ಎಲ್ಪಿಜಿ ದರ ನಿರಂತರವಾಗಿ ಏರಿಕೆ ಕಂಡಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಆಗ್ರಹಿಸಿ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿವೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧಕ್ಕೂ ಮುನ್ನ ಒಂದು ಲೀಟರ್ ಆಟೋ ಎಲ್ಪಿಜಿ ದರ 56 ರೂ. ಇತ್ತು. ಬಳಿಕ ಅದು ಕಳೆದ ಒಂದು ವಾರದ ಹಿಂದೆ 90 ರೂ.ಗಳಿಗೆ ಏರಿತ್ತು. ಆದರೆ ಸದ್ಯ ಬೆಂಗಳೂರಲ್ಲಿ ಒಂದು ಲೀಟರ್ ಆಟೋ ಎಲ್ಪಿಜಿ ದರವೀಗ 95 ರೂಪಾಯಿಗಳಿಗೆ ತಲುಪಿದೆ. ಹೀಗಾಗಿ ಮೀಟರ್​​ ದರ ಏರಿಕೆ ಅನಿವಾರ್ಯ ಎಂಬುದು ಆಟೋ ಚಾಲಕರ ಅಭಿಪ್ರಾಯ.

ಎಷ್ಟು ದರ ಹೆಚ್ಚಳಕ್ಕೆ ಮನವಿ?

ಆಟೋ ಮೀಟರ್ ಕನಿಷ್ಠ ದರವನ್ನು 50 ರೂ. ಹಾಗೂ ಆ ನಂತರದ ರೇಟ್​​ ಕಿಲೋ ಮೀಟರ್​​ಗೆ 25 ರೂ.ಗೆ ಹೆಚ್ಚಿಸಲು ಆಟೋ ಚಾಲಕ ಸಂಘಟನೆಗಳು ಬೇಡಿಕೆ ಇಟ್ಟಿವೆ. ಬೆಂಗಳೂರಲ್ಲಿ ಸದ್ಯ ಆಟೋ ಮೀಟರ್ ಕನಿಷ್ಠ ದರ 36 ರೂ. ಇದ್ದು, ಆ ನಂತರದ ಪ್ರತಿ ಕಿಲೋ ಮೀಟರ್​​ಗೆ 18 ರೂ. ನಿಗದಿಪಡಿಸಲಾಗಿದೆ. ಮೊದಲೇ ಆಟೋ ಎಲ್ಪಿಜಿ ಅಗತ್ಯಕ್ಕೆ ತಕ್ಕಂತೆ ಸಿಗ್ತಿಲ್ಲ. ಈ ನಡುವೆ ಗ್ಯಾಸ್​​ ದರವನ್ನೂ ಕೇಂದ್ರ ಸರ್ಕಾರ ದಿಢೀರ್​​ ಏರಿಸಿರೋದು ಚಾಲಕರನ್ನು ಸಂಕಷ್ಟ ತಳ್ಳಿದೆ ಎಂಬ ಮಾತುಗಳು ಕೇಳಿಬಂದಿವೆ.

Advertisement

ಇನ್ನು ಚಾಲಕ ಸಂಘಟನೆಗಳ ಆಗ್ರಹದ ಬಗ್ಗೆ ಪ್ರಯಾಣಿಕರಿಂದಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ಯಾಸ್​​ ರೇಟ್​​ ಹೆಚ್ಚಳದ ಕಾರಣಕ್ಕೆ ಆಟೋ ಚಾಲಕರ ಬೇಡಿಕೆಯೇನೋ ಸರಿಯಿದೆ. ಆದರೆ ದರ ಏರಿಕೆ ಮಾಡಿದಲ್ಲಿ ಅದು ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರೆ, ಇನ್ನು ಹಲವರು ಆಟೋ ಎಲ್ಪಿಜಿ ದರ ದುಪ್ಪಟ್ಟಾಗಿರುವ ಕಾರಣ ದರ ಏರಿಕೆ ಆಗಲಿ ಎಂದು ತಿಳಿಸಿದ್ದಾರೆ. ಈ ನಡುವೆ ಸಾರಿಗೆ ಸಚಿವರಿಗೂ ತಮ್ಮ ಬೇಡಿಕೆ ಒಳಗೊಂಡ ಮನವಿಯನ್ನು ನೀಡೋದಾಗಿ ಆಟೋ ಚಾಲಕ ಸಂಘಟನೆಗಳು ತಿಳಿಸಿವೆ. ಅಂತಿಮವಾಗಿ ನಿರ್ಧಾರ ಏನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.ತಾಲೂಕು ಮಟ್ಟದ ಭೀಮೋತ್ಸವದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅಭಿಪ್ರಾಯಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನಆಂಧ್ರದ ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಮನವಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ತೊಡಕಗಳು ಅಡ್ಡಿಯಾಗದಿರಲಿ: ರೆಡ್ಡಿ ಶ್ರೀನಿವಾಸಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಲು ಶಾಸಕರ ಸೂಚನೆಎಚ್ ಕೆ ಪಾಟೀಲ ರ ಬೇಟಿ