Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಟೋ ಮೀಟರ್ ದರ ಏರಿಕೆಗೆ ಚಾಲಕ ಸಂಘಟನೆಗಳಿಂದ ಮನವಿ

ಬೆಂಗಳೂರು,

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಆಟೋ ಎಲ್ಪಿಜಿ ದರ ನಿರಂತರವಾಗಿ ಏರಿಕೆ ಕಂಡಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಆಗ್ರಹಿಸಿ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿವೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧಕ್ಕೂ ಮುನ್ನ ಒಂದು ಲೀಟರ್ ಆಟೋ ಎಲ್ಪಿಜಿ ದರ 56 ರೂ. ಇತ್ತು. ಬಳಿಕ ಅದು ಕಳೆದ ಒಂದು ವಾರದ ಹಿಂದೆ 90 ರೂ.ಗಳಿಗೆ ಏರಿತ್ತು. ಆದರೆ ಸದ್ಯ ಬೆಂಗಳೂರಲ್ಲಿ ಒಂದು ಲೀಟರ್ ಆಟೋ ಎಲ್ಪಿಜಿ ದರವೀಗ 95 ರೂಪಾಯಿಗಳಿಗೆ ತಲುಪಿದೆ. ಹೀಗಾಗಿ ಮೀಟರ್​​ ದರ ಏರಿಕೆ ಅನಿವಾರ್ಯ ಎಂಬುದು ಆಟೋ ಚಾಲಕರ ಅಭಿಪ್ರಾಯ.

ಎಷ್ಟು ದರ ಹೆಚ್ಚಳಕ್ಕೆ ಮನವಿ?

ಆಟೋ ಮೀಟರ್ ಕನಿಷ್ಠ ದರವನ್ನು 50 ರೂ. ಹಾಗೂ ಆ ನಂತರದ ರೇಟ್​​ ಕಿಲೋ ಮೀಟರ್​​ಗೆ 25 ರೂ.ಗೆ ಹೆಚ್ಚಿಸಲು ಆಟೋ ಚಾಲಕ ಸಂಘಟನೆಗಳು ಬೇಡಿಕೆ ಇಟ್ಟಿವೆ. ಬೆಂಗಳೂರಲ್ಲಿ ಸದ್ಯ ಆಟೋ ಮೀಟರ್ ಕನಿಷ್ಠ ದರ 36 ರೂ. ಇದ್ದು, ಆ ನಂತರದ ಪ್ರತಿ ಕಿಲೋ ಮೀಟರ್​​ಗೆ 18 ರೂ. ನಿಗದಿಪಡಿಸಲಾಗಿದೆ. ಮೊದಲೇ ಆಟೋ ಎಲ್ಪಿಜಿ ಅಗತ್ಯಕ್ಕೆ ತಕ್ಕಂತೆ ಸಿಗ್ತಿಲ್ಲ. ಈ ನಡುವೆ ಗ್ಯಾಸ್​​ ದರವನ್ನೂ ಕೇಂದ್ರ ಸರ್ಕಾರ ದಿಢೀರ್​​ ಏರಿಸಿರೋದು ಚಾಲಕರನ್ನು ಸಂಕಷ್ಟ ತಳ್ಳಿದೆ ಎಂಬ ಮಾತುಗಳು ಕೇಳಿಬಂದಿವೆ.

ಇನ್ನು ಚಾಲಕ ಸಂಘಟನೆಗಳ ಆಗ್ರಹದ ಬಗ್ಗೆ ಪ್ರಯಾಣಿಕರಿಂದಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ಯಾಸ್​​ ರೇಟ್​​ ಹೆಚ್ಚಳದ ಕಾರಣಕ್ಕೆ ಆಟೋ ಚಾಲಕರ ಬೇಡಿಕೆಯೇನೋ ಸರಿಯಿದೆ. ಆದರೆ ದರ ಏರಿಕೆ ಮಾಡಿದಲ್ಲಿ ಅದು ಪ್ರಯಾಣಿಕರಿಗೆ ಹೊರೆಯಾಗಲಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರೆ, ಇನ್ನು ಹಲವರು ಆಟೋ ಎಲ್ಪಿಜಿ ದರ ದುಪ್ಪಟ್ಟಾಗಿರುವ ಕಾರಣ ದರ ಏರಿಕೆ ಆಗಲಿ ಎಂದು ತಿಳಿಸಿದ್ದಾರೆ. ಈ ನಡುವೆ ಸಾರಿಗೆ ಸಚಿವರಿಗೂ ತಮ್ಮ ಬೇಡಿಕೆ ಒಳಗೊಂಡ ಮನವಿಯನ್ನು ನೀಡೋದಾಗಿ ಆಟೋ ಚಾಲಕ ಸಂಘಟನೆಗಳು ತಿಳಿಸಿವೆ. ಅಂತಿಮವಾಗಿ ನಿರ್ಧಾರ ಏನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ