Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ

ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ
ಇಂಡಿ,ಜು,೧೧: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣಿ ಕ್ರಾಸ್‌ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ ಅವರಿಗೆ  ಮನವಿ ಸಲ್ಲಿಸಿದರು. 
ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.
ಇನ್ನೊರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣಿ ಕ್ರಾಸ್‌ನಿಂದ ಬರಗುಡಿ ರಸ್ತೆ ಕ್ರಾಸ್ ವರೆಗಿನ ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಆದ್ದರಿಂದ ಕೂಡಲೆ ತಾವೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗೆ ದಾರಿ ಒದಗಿಸಬೇಕು ಎಂದು ವಿನಂತಿಸಿದರು.
ಈ ಮನವಿ ಸ್ಪಂದಿಸಿದ ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ ಮಾತನಾಡಿ, ಈಗ ಚುನಾವಣೆ ನಿಮಿತ್ಯ  ಎಲ್ಲೆಡೆ ಎಸ್.ಐ.ಆರ್. ಪ್ರಕ್ರಿಯೆ ನಡೆದಿದೆ. ಹೀಗಾಗಿ ಈ ಪ್ರಕ್ರಿಯೆ ಮುಗಿದ ಬಳಿಕ ರಸ್ತೆ ಸಮಸ್ಯೆ ಪರಿಹರಿಸಲಾಗುವದು ಎಂದರು. 
ಈ ಸಂದರ್ಭದಲ್ಲಿ ಮಹೇಶ ಗಾಯಕವಾಡ, ದುಂಡಪ್ಪ ಶಿವಶರಣ, ಶಿವಾನಂದ ಸಿಂಗೆ, ಪ್ರಕಾಶ ಶಿವಶರಣ, ಅಪ್ಪಾಶ ಕಾಂಬಳೆ, ಸಿದ್ದು ಬನಸೋಡೆ, ಉಪಸ್ಥಿತರಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ"ಜಗತ್ತಿನಲ್ಲಿ ಪ್ರತಿಯೊಂದು ವಸ್ತುವು ಧರ್ಮವನ್ನು ಆಶ್ರಯಿಸಿದೆ"ಉತ್ಪಾದನೆಯಷ್ಟೇ ಬ್ರ್ಯಾಂಡಿಂಗ್, ಮಾರ್ಕೆಟಿಂಗ್‌ಗೂ ಮಹತ್ವ ನೀಡಿ: ಜಯಂತ ಹುಂಬರವಾಡಿವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಲಕ್ಷ್ಮಣ ಸವದಿವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಲಕ್ಷ್ಮಣ ಸವದಿಶಾಸಕ ಬಾಬಾಸಾಹೇಬ  ಪ್ರಯತ್ನದಿಂದ 110 ಕೆ ವಿ ವಿದ್ಯುತ್ ಸ್ಟೇಷನ್ ಮಂಜೂರು.ಪ್ರಿಸಿಷನ್ ಎಂಜಿನಿಯರಿಂಗ್ ಶ್ರೇಷ್ಠತಾ ಕೇಂದ್ರ ಉದ್ಘಾಟನೆ"ಜನರ ಧ್ವನಿಯಾಗಿ ಪತ್ರಿಕೆಗಳು ಕಾರ್ಯ ನಿರ್ವಹಿಸುತ್ತಿರುವದು ಹೆಮ್ಮೆಯ ಸಂಗತಿ"ನಾಳೆ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಶಿಕ್ಷಣದಲ್ಲಿ ಭಾರತೀಯತೆಯನ್ನು ತರಬೇಕು-ಕಿರಣ್‌ರಾಮ