Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಕ ಅನಾಥ ಬಾಲಕನ ಪೋಷಕರ ಪತ್ತಗೆ ಮನವಿ


ಬಳ್ಳಾರಿ,ಜು.18 ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಅಲೆದಾಡುತ್ತಿದ್ದ ಸುಮಾರು 12 ವರ್ಷ ವಯಸ್ಸಿನ ಮೂಕ ಅನಾಥ ಬಾಲಕನೊಬ್ಬ ಪತ್ತೆಯಾಗಿದ್ದು, ಪ್ರಸ್ತುತ ಆತನನ್ನು ಇಲ್ಲಿನ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ. ಬಾಲಕನ ಪೋಷಕರನ್ನು ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ ಅವರು ಮನವಿ ಮಾಡಿದ್ದಾರೆ.
*ಘಟನೆಯ ವಿವರ:*
ಜೂ.06 ರಂದು ಬಳ್ಳಾರಿ ನಗರದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿಯವರು ಈ ಬಾಲಕನನ್ನು ವಶಕ್ಕೆ ಪಡೆದಿದ್ದರು. ಬಾಲಕನ ತಾತ್ಕಾಲಿಕ ಪೋಷಣೆ ಹಾಗೂ ರಕ್ಷಣೆಗಾಗಿ ಅಂದೇ ಆತನನ್ನು ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಬಾಲಕನಿಗೆ ಮಾತನಾಡಲು ಬರುವುದಿಲ್ಲ (ಮೂಕನಾಗಿದ್ದಾನೆ) ಹಾಗೂ ಆತನ ವಿಳಾಸದ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ಲಭ್ಯವಾಗಿಲ್ಲ. ಯಾವುದೇ ಭಾಷೆಯಲ್ಲಿ ಮಾತನಾಡಿಸಿದರೂ ಆತನಿಂದ ಮಾಹಿತಿ ಸಿಗುತ್ತಿಲ್ಲ ಹಾಗೂ ಆತನಿಗೆ ಓದಲು ಮತ್ತು ಬರೆಯಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಬಾಲಕನ ವಿಳಾಸ ಪತ್ತೆ ಹಚ್ಚಲು ಆತನ ಹೆಸರಿನಲ್ಲಿ ಆಧಾರ್ ಕಾರ್ಡ್ ನೋಂದಣಿಯಾಗಿದೆಯೇ ಎಂದು ಪರಿಶೀಲಿಸಲಾಗಿದ್ದು, ಈ ಹಿಂದೆ ಯಾವುದೇ ಆಧಾರ್ ನೋಂದಣಿ ಆಗದಿರುವುದು ಕಂಡುಬAದಿದೆ.
ಬಾಲಕನ ಚಹರೆ: ಎತ್ತರ 4.2 ಅಡಿ, 40 ಕೆ.ಜಿ, ಸಾಧಾರಣ ಮೈಕಟ್ಟು, ಉದ್ದ ಮುಖ, ಕಪ್ಪು ಮೈ ಬಣ್ಣ, ಕಪ್ಪು ತಲೆ ಕೂದಲು ಇರುತ್ತದೆ. ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಹಳದಿ ಚೆಕ್ ಬಣ್ಣದ ಅಂಗಿಯನ್ನು ಪತ್ತೆಯಾದ ಸಂರ್ಧಭದಲ್ಲಿ ಧರಿಸಿರುತ್ತಾನೆ.
ಬಾಲಕನ ಕುಟುಂಬದವರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯ ದೂ.08392-241373, ಬಾಲಮಂದಿರ ಅಧೀಕ್ಷಕರ ಮೊ.9886555312, 8618825644 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ