Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಆತ್ಮಹತ್ಯೆ!

ಲೂಧಿಯಾನ : ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಅವರು ಲೂಧಿಯಾನದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.


ನಿವೃತ್ತ ಡಿಎಸ್​ಪಿ ಆತ್ಮಹತ್ಯೆ: ಡಿಎಸ್ಪಿ ಬರ್ಜಿಂದರ್ ಸಿಂಗ್ ಭುಲ್ಲಾರ್ ಒಂದು ವರ್ಷದ ಹಿಂದೆ ನಿವೃತ್ತರಾಗಿದ್ದಾರೆ ಮತ್ತು ಮಾನಸಿಕ ಅಸ್ವಸ್ಥವಾಗಿದ್ದರು ಎಂದು ಹೇಳಲಾಗಿದೆ. ಮಾಜಿ ಡಿಎಸ್ಪಿ ಅವರು ತಮ್ಮ ಪೋಷಕರೊಂದಿಗೆ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಅವರ ಪತ್ನಿ ಮತ್ತು ಮಕ್ಕಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸರಭನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನೋಡಿದಾಗ ಡಿಎಸ್ಪಿ ಕೊಠಡಿಯಲ್ಲಿದ್ದ ಕುರ್ಚಿಯ ಮೇಲೆ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ.


ವಿದೇಶದಲ್ಲಿ ಪತ್ನಿ, ಮಕ್ಕಳು: ಈ ಬಗ್ಗೆ ಬಂದಿರುವ ಮಾಹಿತಿ ಪ್ರಕಾರ ಬರ್ಜಿಂದರ್ ಸಿಂಗ್ ಭುಲ್ಲಾರ್ ಅವರು ಸುಮಾರು 1 ವರ್ಷದ ಹಿಂದೆ ನಿವೃತ್ತರಾಗಿದ್ದರು. ಅವರು ನಿವೃತ್ತರಾದಾಗ, ಅವರ ಕೊನೆಯ ಪೋಸ್ಟಿಂಗ್ IRB ಅಲ್ಲಿ ಆಗಿತ್ತು. ಮೃತ ಡಿಎಸ್​ಪಿ ಸರಭನಗರ ಪ್ರದೇಶದ ಗ್ರೀನ್ ಅವೆನ್ಯೂದಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದರೆ, ಅವರ ಪತ್ನಿ ತಮ್ಮ ಮಕ್ಕಳೊಂದಿಗೆ ವಿದೇಶದಲ್ಲಿ ನೆಲೆಸಿದ್ದಾರೆ.


ಮಾನಸಿಕವಾಗಿ ನೊಂದಿದ್ದ ಡಿಎಸ್‌ಪಿ: ಬರ್ಜಿಂದರ್ ಸಿಂಗ್ ಕೆಲಕಾಲ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಆಗಾಗ ಮನೆಯಲ್ಲಿ ಒಬ್ಬರೇ ಕೋಣೆಯಲ್ಲಿ ಕೂರುತ್ತಿದ್ದರು. ನಿನ್ನೆ, ಕೋಣೆಯಲ್ಲಿ ಕುರ್ಚಿಯ ಮೇಲೆ ಕುಳಿತಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿದ ಪೋಷಕರು ಕೊಠಡಿಯನ್ನು ತಲುಪಿದಾಗ ಬರ್ಜಿಂದರ್ ಅವರ ದೇಹವು ಅವರ ಮುಂದೆ ಬಿದ್ದಿದ್ದು, ಈ ವೇಳೆ ಸ್ಥಳದಲ್ಲಿ ಪಿಸ್ತೂಲ್​ ಸಹ ಪತ್ತೆಯಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ