Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಆತ್ಮಹತ್ಯೆ!

ಲೂಧಿಯಾನ : ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಅವರು ಲೂಧಿಯಾನದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.


ನಿವೃತ್ತ ಡಿಎಸ್​ಪಿ ಆತ್ಮಹತ್ಯೆ: ಡಿಎಸ್ಪಿ ಬರ್ಜಿಂದರ್ ಸಿಂಗ್ ಭುಲ್ಲಾರ್ ಒಂದು ವರ್ಷದ ಹಿಂದೆ ನಿವೃತ್ತರಾಗಿದ್ದಾರೆ ಮತ್ತು ಮಾನಸಿಕ ಅಸ್ವಸ್ಥವಾಗಿದ್ದರು ಎಂದು ಹೇಳಲಾಗಿದೆ. ಮಾಜಿ ಡಿಎಸ್ಪಿ ಅವರು ತಮ್ಮ ಪೋಷಕರೊಂದಿಗೆ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಅವರ ಪತ್ನಿ ಮತ್ತು ಮಕ್ಕಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸರಭನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನೋಡಿದಾಗ ಡಿಎಸ್ಪಿ ಕೊಠಡಿಯಲ್ಲಿದ್ದ ಕುರ್ಚಿಯ ಮೇಲೆ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ.


ವಿದೇಶದಲ್ಲಿ ಪತ್ನಿ, ಮಕ್ಕಳು: ಈ ಬಗ್ಗೆ ಬಂದಿರುವ ಮಾಹಿತಿ ಪ್ರಕಾರ ಬರ್ಜಿಂದರ್ ಸಿಂಗ್ ಭುಲ್ಲಾರ್ ಅವರು ಸುಮಾರು 1 ವರ್ಷದ ಹಿಂದೆ ನಿವೃತ್ತರಾಗಿದ್ದರು. ಅವರು ನಿವೃತ್ತರಾದಾಗ, ಅವರ ಕೊನೆಯ ಪೋಸ್ಟಿಂಗ್ IRB ಅಲ್ಲಿ ಆಗಿತ್ತು. ಮೃತ ಡಿಎಸ್​ಪಿ ಸರಭನಗರ ಪ್ರದೇಶದ ಗ್ರೀನ್ ಅವೆನ್ಯೂದಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದರೆ, ಅವರ ಪತ್ನಿ ತಮ್ಮ ಮಕ್ಕಳೊಂದಿಗೆ ವಿದೇಶದಲ್ಲಿ ನೆಲೆಸಿದ್ದಾರೆ.


ಮಾನಸಿಕವಾಗಿ ನೊಂದಿದ್ದ ಡಿಎಸ್‌ಪಿ: ಬರ್ಜಿಂದರ್ ಸಿಂಗ್ ಕೆಲಕಾಲ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಆಗಾಗ ಮನೆಯಲ್ಲಿ ಒಬ್ಬರೇ ಕೋಣೆಯಲ್ಲಿ ಕೂರುತ್ತಿದ್ದರು. ನಿನ್ನೆ, ಕೋಣೆಯಲ್ಲಿ ಕುರ್ಚಿಯ ಮೇಲೆ ಕುಳಿತಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿದ ಪೋಷಕರು ಕೊಠಡಿಯನ್ನು ತಲುಪಿದಾಗ ಬರ್ಜಿಂದರ್ ಅವರ ದೇಹವು ಅವರ ಮುಂದೆ ಬಿದ್ದಿದ್ದು, ಈ ವೇಳೆ ಸ್ಥಳದಲ್ಲಿ ಪಿಸ್ತೂಲ್​ ಸಹ ಪತ್ತೆಯಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ