Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿಯ ಜೊತೆಗೆ ನಮ್ಮ ಕುಟುಂಬದ ಯೋಗಕ್ಷೇಮಕ್ಕೂ ಆದ್ಯತೆ ಇರಲಿ: ನಿವೃತ್ತ ಲೋಕಾಯುಕ್ತ ಎಸ್.ಪಿ.ಶಂಕರ ರಾಗಿ



ಧಾರವಾಡ : ಪೊಕೀಸ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ನಮ್ಮ ಹೆಮ್ಮೆ. ಅದರೊಂದಿಗೆ ನಮ್ಮ ಕುಟುಂಬಕ್ಕೂ ಆದ್ಯತೆ ನೀಡಬೇಕು. ಕುಟುಂಬ ಸದಸ್ಯರ ಆರೋಗ್ಯ, ಶಿಕ್ಷಣಗಳಿಗೆ ಮಹತ್ವ ನೀಡಬೇಕು ಎಂದು ನಿವೃತ್ತ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶಂಕರ ರಾಗಿ ಅವರು ಹೇಳಿದರು.


 ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಮೀಸಲು ಪೊಲೀಸ್ ಪಡೆಯ ಕವಾಯತ್ತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಮತ್ತು ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.


ಪೊಲೀಸ ಅಧಿಕಾರಿ, ಸಿಬ್ಬಂದಿಗಳು ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾರೆ. ಅವರ ಸೇವೆಗ ತಕ್ಕ ಸೌಲಭ್ಯಗಳು ಸೀಗಬೇಕು. ಸರಕಾರ ಪೊಲೀಸರ ಸಮಸ್ಯೆಗಳಿಗೆ, ಮೂಲಸೌಕರ್ಯಗಳಿಗೆ ಕಿವಿ ಆಗಬೇಕು ಎಂದರು.


ನಮ್ಮನ್ನು ನಂಬಿರುವ ನಮ್ಮ ಕುಟುಂಬಕ್ಕೂ ನ್ಯಾಯ ಸೀಗುವಂತೆ ನಾವು ಗಮನ ಹರಿಸಬೇಕು. ಸೇವಾ ನಿವೃತ್ತಿ ನಂತರ ನಮ್ಮ ಯೋಗಕ್ಷೇಮ ನೋಡಿಕೊಳ್ಳುವವರು ನಮ್ಮ ಕುಟುಂಬದವರು. ಆದ್ದರಿಂದ ಅವರಿಗೂ ಗಮನ ನೀಡಬೇಕು ಎಂದರು.


ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಎಂ.ಬ್ಯಾಕೋಡ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ ಕಲ್ಯಾಣ ನಿಧಿಯ ವರದಿ ವಾಚಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎನ್.ವ್ಹಿ.ಬರಮನಿ ಅವರು ವಂದಿಸಿದರು.


ಕೆ.ಎಸ್.ಐ.ಎಪ್.ಸಿ. ಕಮಾಂಡೆಂಟ್ ಗಣೇಶ ಹಾಗೂ ಉಪ ಪೊಲೀಸ ಅಧೀಕ್ಷಕ ಎಸ್.ಎಂ.ನಾಗರಾಜ ಅವರು ವೇದಿಕೆಯಲ್ಲಿದ್ದರು.


ಜಿಲ್ಲಾ ಮೀಸಲು ಪೊಲೀಸ ಪಡೆಯ ಎ.ಆರ್.ಎಸ್.ಐ ಗಳಾದ ಎ.ಎಫ್.ಜಿಲ್ಲೇನವರ ಹಾಗೂ ವೈ.ಎಂ.ದಿಡ್ಡಮನಿ ಅವರು ಕಾರ್ಯಕ್ರಮ ನಿರೂಪಿಸಿದರು.


*ತಂಡಗಳ ಪರಿವೀಕ್ಷಣೆ:* ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಲೋಕಾಯುಕ್ತ ಎಸ್.ಪಿ.ಶಂಕರ ರಾಗಿ ಅವರು ಪರೇಡ್ ಕಮಾಂಡರ್ ಎಫ್.ಆರ್.ಡೊಕ್ಕಣ್ಣವರ ಸಹಾಯದಲ್ಲಿ ತೆರೆದ ಜೀಪ್ ದಲ್ಲಿ ವಿವಿಧ ಪರೇಡ್ ತಂಡಗಳ ವಿಕ್ಷಣೆ ಮಾಡಿ, ಗೌರವ ಸ್ವಿಕರಿಸಿದರು.


*ಪೊಲೀಸ್ ಪಥಸಂಚಲನ:* ಪರೇಡ್ ಕಮಾಂಡರ್ ಗಳಾದ  ಎಫ್.ಆರ್.ಡೊಕ್ಕಣ್ಣವರ ಹಾಗೂ ಆರ್.ಎಸ್.ಗುಡನಟ್ಟಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳಾದಜಿಲ್ಲಾ ಮೀಸಲು ಪೊಲೀಸ ಪಡೆಯ  ಆರ್.ಎಸ್.ಐ.  ಸತೀಶ ಠಕ್ಕಳಕಿ, ಮಂಜುನಾಥ ಕುರಗೋಡ, ಧಾರವಾಡ ಗ್ರಾಮೀಣ ಪೊಲೀಸ ಠಾಣೆಯ ಬಸನಗೌಡ ಬಿ.ಎಂ., ಜಿಲ್ಲಾ ನಿಯಂತ್ರಣ (ನಿಸ್ತಂತು) ಕೊಠಡಿಯ ಪಿ.ಎಸ್.ಐ ಉಮೇಶ ಕಮತಿ, ಗುಡಗೇರಿ ಪೊಲೀಸ್ ಠಾಣೆಯ ಪಿಎಸ್ಐ ಮಂಜುಳಾ ಸದಾರಿಯವರ ಮತ್ತು ಆರ್.ಎಸ್.ಐ ಕೆ.ಎಫ್.ಹದ್ದಣ್ಣವರ ಆಕರ್ಷಕವಾದ ನಿಧಾನಗತಿಯ ಮತ್ತು ತ್ವರೀತಗತಿಯ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದರು.


ಜಿಲ್ಲಾ ಮೀಸಲು ಪೊಲೀಸ ಪಡೆಯ ಎ.ಆರ್.ಎಸ್.ಐ. ವೈ.ಎಫ್.ಭಜಂತ್ರಿ ಅವರ ನೇತೃತ್ವದ ಜಿಲ್ಲಾ ಪೊಲೀಸ್ ಬ್ಯಾಂಡ್ ತಂಡವು ಸ್ಟಿಕ್ ಮೇಜರ್ ಸಾಗರ ಬಸರಕೊಡಿ ಅವರ ಸಹಾಯದಲ್ಲಿ ಅತ್ಯುತ್ತಮವಾಗಿ ಬ್ಯಾಂಡ್  ನುಡಿಸಿದರು.


ಪೊಲೀಸ ಅಧಿಕಾರಿ ಜಿ.ಎಲ್.ಜುಂಜೂರಿ ಅವರ ಅವರ ಬೆಂಗಾವಲಿನಲ್ಲಿ ವ್ಹಿ.ಡಿ.ಕುರಗೋವಿನಕೊಪ್ಪ ಅವರು ರಾಷ್ಟ್ರಧ್ವಜವನ್ನು ಮತ್ತು ಎಸ್.ಆರ್.ಕರಿಕಟ್ಟಿ ಅವರು ಪೊಲೀಸ್ ಧ್ವಜದೊಂದಿಗೆ ಆಗಮಿಸಿದ್ದರು, ಧ್ವಜಗಳಿಗೆ ಗೌರವ ಸಲ್ಲಿಸಲಾಯಿತು.


*ಸೇವಾ ನಿವೃತ್ತರಿಗೆ ಗೌರವ ಸಮರ್ಪಣೆ:* ಪೊಲೀಸ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವಿವಿದ ಅಧಿಕಾರಿ ಮತ್ತು ಸಿಬ್ಬಂದಿಗಳಾದ ಎಚ್. ಜಿ. ತಳವಾರ, ಶ್ರೀಮತಿ ಎನ್. ವೈ. ಗೊಂದಳಿ, ಎ. ಜಿ. ಹವಗಿ, ಕೆ. ಎಚ್. ಕರ್ಜಗಿ, ಶ್ರೀಮತಿ ಎಸ್. ಕೆ. ನಾಗನಗೌಡರ, ಆರ್.ಜೆ. ಪಂಗಳೇರ, ಎಲ್ .ಎಸ್ . ಮುತ್ತಿನ, ಎ. ಎಂ. ಅಂಬಿಗೇರ, ಆರ್. ಎನ್. ಗೋರಗುದ್ದಿ,  ವ್ಹಿ .ಎಸ್. ಬೆಳಗಾಂಕರ, ಶ್ರೀಮತಿ  ಚಾಮುಂಡೇಶ್ವರಿ, ಎಂ.ಎಸ್ .ಅಂಚಿ, ಎಂ.ಎ. ಗೋಲಂದಾಜ, ಬಿ. ಎಸ್. ಹುಬ್ಬಳ್ಳಿ ಮತ್ತು  ಬಿ.ಎಂ. ಮಡಿವಾಳರ ಅವರನ್ನು ಮುಖ್ಯ ಅತಿಥಿಗಳೊಂದಿಗೆ ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಎಎಸ್ ಪಿ ಎನ್.ವ್ಹಿ.ಬರಮಣಿ ಅವರು ಸನ್ಮಾನಿಸಿ, ಗೌರವಿಸಿದರು.


ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ ಠಾಣೆಗಳ ಅಧಿಕಾರಿ, ಸಿಬ್ಬಂದಿಗಳು, ಎಸ್.ಪಿ.ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ನಿವೃತ್ತ ಪೊಲೀಸ ಅಧಿಕಾರಿಗಳು, ಪೊಲೀಸ ಕುಟುಂಬಗಳ ಸದಸ್ಯರು ಸಾರ್ವಜನಿಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ