LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೈಲಿನಿಂದ ಬಿಡುಗಡೆಯಾದ ರೇವಣ್ಣ ನಾಳೆ ಹೊಳೆನರಸೀಪುರಕ್ಕೆ: ಭರ್ಜರಿ ಸ್ವಾಗತಕ್ಕೆ ಸಿದ್ಧತೆ

ಹಾಸನ, ಮೇ.14: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದು ಎನ್ನಲಾದ ವಿಡಿಯೋಕ್ಕೆ ಸಂಬಂಧಿಸಿದ ಸಂತ್ರಸ್ಥೆ ಮಹಿಳೆಯನ್ನು ಅಪಹರಿಸಿದ್ದ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಜೈಲು ಸೇರಿದ್ದರು. ಇಂದು(ಮೇ.14) ಜೈಲಿನಿಂದ ಬಿಡುಗಡೆಯಾಗಿದ್ದು, ಜೆಡಿಎಸ್​ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಇದರ ಬೆನ್ನಲ್ಲೇ ನಾಳೆ (ಮೇ.15) ರೇವಣ್ಣ ಅವರು ಸ್ವಕ್ಷೇತ್ರ ಹೊಳೆನರಸೀಪುರಕ್ಕೆ ತೆರಳುವ ಸಾಧ್ಯತೆಯಿದ್ದು, ರೇವಣ್ಣ ಸ್ವಾಗತಕ್ಕೆ ಜೆಡಿಎಸ್​ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗಡಿಯಲ್ಲೇ ಸ್ವಾಗತಕೋರುವುದಕ್ಕೆ ಭರ್ಜರಿ ತಯಾರಿ ನಡೆಸಿದ್ದಾರೆ.

ಇನ್ನು ರೇವಣ್ಣ ಜೈಲಿನಿಂದ ಬಿಡುಗಡೆ ಹಿನ್ನಲೆ ಮಂಕಾಗಿದ್ದ ದಳ ಕೋಟೆಯಲ್ಲಿ ಉತ್ಸಾಹ ಹೆಚ್ಚಿದೆ. ತಮ್ಮ ನಾಯಕನ ಸ್ಚಾಗತಕ್ಕೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಇಂದು ಬಿಡುಗಡೆಯಾಗಿ ಬೆಂಗಳೂರಿನ ಮನೆಗೆ ತೆರಳಿರುವ ರೇವಣ್ಣ ಅವರು, ನಾಳೆ(ಮೇ.15) ಹೊಳೆನರಸೀಪುರದ ಮನೆಗೆ ಆಗಮಿಸಿ, ಬಳಿಕ ಆರಾಧ್ಯ ದೇವಾಲಯಗಳಾದ ಹೊಳೆನರಸೀಪುರದ ಲಕ್ಷ್ಮಿ‌ನರಸಿಂಹ, ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ‌ರುವ ಮನೆ ದೇವರು ದೇವೇಶ್ವರ, ಮಾವಿನಕೆರೆಯ ಬೆಟ್ಟದ ರಂಗನಾಥನಿಗೆ ಪೂಜೆ ಸಲ್ಲಿಸುವ ಸಾಧ್ಯತೆಯಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್