ಬಾಗಲಕೋಟೆ, ಜುಲೈ ೦೨ : ಗ್ರಾಮೀಣ ರಸ್ತೆ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬಾಗಲಕೋಟೆ ತಾಲೂಕಿನ ನಾಗರಾಳ ಹಾಗೂ ನಾಗಸಂಪಗಿ ಗ್ರಾಮಗಳಲ್ಲಿ ಒಟ್ಟು ೯೫ ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ ಮೇಟಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಾಗರಾಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯವರೆಗೆ ೫೦ ಲಕ್ಷ ರೂ.ಗಳ ವೆಚ್ಚದಲ್ಲಿ ಡಾಂಬರೀಕರಣ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗೂ ನಾಗಸಂಪಗಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯವರೆಗೆ ೪೫ ಲಕ್ಷ ರೂ.ಗಳ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಮಹತ್ವದ್ದಾಗಿದೆ. ಉತ್ತಮ ರಸ್ತೆಗಳ ನಿರ್ಮಾಣದಿಂದ ಸಾರ್ವಜನಿಕರ ಸಂಚಾರ ಸುಗಮವಾಗುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ವೇಗ ಸಿಗಲಿದೆ ಎಂದರು.
ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಸರ್ಕಾರದಿಂದ ದೊರೆಯುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಸವಂತಪ್ಪ ಮೇಟಿ, ಹನಮಂತ ಗಣಿ, ಆನಂದ ಮೇಟಿ, ಹುಲ್ಲಪ್ಪ ತೇಜಿ, ಬಸಲಿಂಗಪ್ಪ ಬಿರಾದಾರ, ಹನಮಂತ ಹಂಡಿ, ಸಂಗಪ್ಪ ಸೀತಿಮನಿ, ಗೋವಿಂದ ಪೂಜಾರಿ, ಪವನ್ ಧರ್ಮರ, ರಮೇಶ್ ಕೊಳ್ಳರ, ವೈ. ವೈ. ತಿಮ್ಮಾಪುರ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿರುವರು.
ಛಾಯಾಚಿತ್ರ ಲಗತ್ತಿಸಿದೆ. ೧ ಮತ್ತು ೨
